Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...