Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...