Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...