Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...