Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....