Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ಬಾಕಿ ಇರುವ ಪ್ರವಾಹ ಕಾಮಗಾರಿ ಮೇ 30 ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು: ಎಸಿಎಸ್ ತುಷಾರ್ ಗಿರಿನಾಥ್

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ ನಗರ,...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....