Homeಅಂತರಾಷ್ಟ್ರೀಯಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ.

ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. 

ಸಾವಿರಾರು ಪ್ರತಿಭಟನಾಕಾರರು ಬಾಂಗ್ಲಾದೇಶದ ರಾಜಧಾನಿ ಢಾಕಾದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಹಂತಕರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಅವಾಮಿ ಲೀಗ್ ಪಕ್ಷದ ಕಚೇರಿ, ದೇಶದ ಎರಡು ಪ್ರಮುಖ ಪತ್ರಿಕೆಗಳಾದ ಡೈಲಿ ಸ್ಟಾರ್ ಮತ್ತು ಪ್ರಥಮ್ ಆಲೋ ಕಚೇರಿಗಳಿಗೆ ಬೆಂಕಿ ಹೆಚ್ಚಿದ್ದು, ಕಚೇರಿಗೊಳಗೆ ಸಿಬ್ಬಂದಿಗಳು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.

ಷರೀಫ್ ಉಸ್ಮಾನ್ ಹಾದಿ ಅವರು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ವಿದ್ಯಾರ್ಥಿ ಹೋರಾಟಕ್ಕೆ ನಾಯಕತ್ವ ನೀಡಿದ್ದ ಅವರು, ತಮ್ಮ ಅನೇಕ ಭಾಷಣಗಳಲಿ ಭಾರತವನ್ನು ಕುಟುವಾಗಿ ಟೀಕಿಸುತ್ತಿದ್ದರು. ಫೆಬ್ರವರಿ 2026ರಲ್ಲಿ ನಡೆಯಲಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಹಾದಿ ಅವರು ಅಭ್ಯರ್ಥಿಯಾಗಿ ಸ್ಪರ್ಧೆ ಕೂಡ ಮಾಡಿದ್ದರು.

ಆದರೆ, ಕಳೆದ ವಾರದ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೊರಬರುತ್ತಿದ್ದಾಗ, ಷರೀಫ್ ಉಸ್ಮಾನ್ ಹಾದಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಹಾದಿ ಅವರನ್ನು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಹಾದಿ ಅವರ ಸಾವು ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಉಸ್ಮಾನ್ ಹಾದಿಯ ಸಾವಿನ ಸುದ್ದಿ ಹರಡುತ್ತಿದ್ದಂತೆ ಢಾಕಾದಲ್ಲಿ ಕನಿಷ್ಠ ಮೂರು ಕಟ್ಟಡಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಘಟನೆ ಬೆನ್ನಲ್ಲೇ ಅಗ್ನಿಶಾಮಕ ಹಾಗೂ ನಾಗರಿಕ ರಕ್ಷಣಾ ಇಲಾಖೆಯ ವಕ್ತಾರರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಡೈಲಿ ಸ್ಟಾರ್ ಕಟ್ಟಡದಲ್ಲಿ ಉಂಟಾದ ಬೆಂಕಿಯನ್ನು ಶುಕ್ರವಾರ ಬೆಳಗಿನ 1.40ರ ವೇಳೆಗೆ ನಿಯಂತ್ರಣಕ್ಕೆ ತರಲಾಗಿದೆ. ಆದರೂ 27 ಸಿಬ್ಬಂದಿ ಕಟ್ಟಡದ ಒಳಗೇ ಸಿಲುಕಿದ್ದಾರೆಂದು ವರದಿಗಳು ತಿಳಿಸಿವೆ.

ಡೈಲಿ ಸ್ಟಾರ್ ಪತ್ರಿಕೆಯ ವರದಿಗಾರ್ತಿ ಝೈಮಾ ಇಸ್ಲಾಂ, “ನಾನು ಉಸಿರಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿ ತುಂಬಾ ಹೊಗೆ ಇದೆ. ನಾನು ಒಳಗಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆಯುವ ಮೂಲಕ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪತ್ರಿಕೆಗಳು ಭಾರತ ಪರವಾಗಿವೆ ಎಂದು ಆರೋಪಿಸಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದನ್ನು ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಬಾಂಗ್ಲಾದೇಶದಲ್ಲಿನ ಭಾರತದ ರಾಯಭಾರಿ ಕಚೇರಿಯನ್ನು ನುಗ್ಗಲು ನೂರಾರು ಪ್ರತಿಭಟನಾಕಾರರು ಯತ್ನಿಸಿದ್ದು, ಪೊಲೀಸರು ಅಶ್ರುವಾಯ ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ನಡುವೆ ಢಾಕಾದಿಂದ ಹೊರ ಹೋಗುವ ಪ್ರಮುಖ ಹೆದ್ದಾರಿಯನ್ನೂ ಪ್ರತಿಭಟನಾಕಾರರು ತಡೆದಿದ್ದು, ಢಾಕಾದಲ್ಲಿರುವ ಬೆಂಗಾಳಿ ಸಂಸ್ಕೃತಿಗೆ ಸಮರ್ಪಿತ ಕೇಂದ್ರವಾದ ಛಾಯನಾಟ್ ಮೇಲೂ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.

ಉಸ್ಮಾನ್ ಹಾದಿ ಸಾವು ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಪ್ರತಿಕ್ರಿಯೆ ನೀಡಿದ್ದು, ಹಾದಿ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಭಯ, ಭೀತಿ ಅಥವಾ ರಕ್ತಪಾತದ ಮೂಲಕ ಪ್ರಜಾಪ್ರಭುತ್ವದ ಪಯಣವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...