Homeಅಂತರಾಷ್ಟ್ರೀಯಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು, ಅವರ ಏಳು ವರ್ಷದ ಮಗಳು ಸಜೀವ ದಹನಗೊಂಡಿದ್ದಾರೆ. ಇತರ ಇಬ್ಬರು ಹೆಣ್ಣುಮಕ್ಕಳು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬಿಎನ್‌ಪಿ ನಾಯಕ ಬಿಲಾಲ್ ಹುಸೈನ್ ಅವರ ಲಕ್ಷ್ಮಿಪುರದ ಮನೆಗೆ ಶನಿವಾರ ಮುಂಜಾನೆ ಬೆಂಕಿ ಹಚ್ಚಲಾಗಿದೆ.

ಹುಸೈನ್ ಭಬಾನಿಗಂಜ್ ಯೂನಿಯನ್ ಬಿಎನ್‌ಪಿಯ ಸಹಾಯಕ ಸಂಘಟನಾ ಕಾರ್ಯದರ್ಶಿ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಹುಸೈನ್ ಅವರ ಪುತ್ರಿ ಆಯಿಷಾ ಅಕ್ತರ್ ಸುಟ್ಟು ಕರಕಲಾಗಿದ್ದು, ಅವರ ಇನ್ನಿಬ್ಬರು ಪುತ್ರಿಯರಾದ ಸಲ್ಮಾ ಅಕ್ತರ್ (16) ಮತ್ತು ಸಮಿಯಾ ಅಕ್ತರ್ (14) ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಬಿಲಾಲ್ ಅವರು ಲಕ್ಷ್ಮಿಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪುತ್ರಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಢಾಕಾಗೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಷರೀಫ್ ಉಸ್ಮಾನ್ ಹಾದಿ ಸಿಂಗಾಪುರದಲ್ಲಿ ನಿಧನರಾದರು ಎಂಬ ಸುದ್ದಿ ಹೊರಬಿದ್ದ ನಂತರ, ಕಳೆದ ಗುರುವಾರ ರಾತ್ರಿ ರಾಜಧಾನಿ ಢಾಕಾ ಸೇರಿದಂತೆ ಬಾಂಗ್ಲಾದೇಶದ ಹಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಡೈಲಿ ಸ್ಟಾರ್ ಮತ್ತು ಪ್ರೋಥೋಮ್ ಅಲೋ ಕಟ್ಟಡಗಳಿಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದಾರೆ. ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರ ಮನೆ ‘ಧನ್ಮೊಂಡಿ 32’ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.

ರಾಜ್‌ಶಾಹಿ ಮತ್ತು ಚಿತ್ತಗಾಂಗ್‌ನಲ್ಲಿ ಭಾರತೀಯ ರಾಯಭಾರ ಕಚೇರಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ.

‘ಹಾದಿ’ ‘ಭಾರತೀಯ ಆಧಿಪತ್ಯ’ ಎಂದು ಕರೆಯುತ್ತಿದ್ದದ್ದಕ್ಕೆ ವಿರುದ್ಧವಾಗಿ ತೀವ್ರವಾದ ನಿಲುವುಗಳಿಗೆ ಹೆಸರಾಗಿದ್ದರು. ಅವರನ್ನು ಗುಂಡಿಟ್ಟು ಕೊಂದವರು ದಾಳಿಯ ನಂತರ ಭಾರತಕ್ಕೆ ಆಗಮಿಸಿದ್ದಾರೆ ಆರೋಪಿಸಲಾಗಿದೆ. ಆದರೆ, ಈ ಆರೋಪಕ್ಕೆ ಇದುವರೆಗೆ ಅಧಿಕಾರಿಗಳು ಯಾವುದೇ ದೃಢವಾದ ಪುರಾವೆಗಳನ್ನು ನೀಡಿಲ್ಲ.

ಅಶಾಂತಿ ಹರಡುತ್ತಿದ್ದಂತೆ, ಕನಿಷ್ಠ ಒಂದು ಕೋಮು ಘಟನೆ ವರದಿಯಾಗಿದೆ. ಪೊಲೀಸರ ಪ್ರಕಾರ, ಮೈಮೆನ್‌ಸಿಂಗ್‌ನಲ್ಲಿ ದೇವದೂಷಣೆಯ ಆರೋಪದ ಮೇಲೆ ಗುಂಪೊಂದು ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದಿದೆ.

ಡಿಸೆಂಬರ್ 12ರಂದು ಮಧ್ಯ ಢಾಕಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಹಾದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ವಿಮಾನದಲ್ಲಿ ಸಾಗಿಸಲಾಗಿತ್ತು. ಡಿಸೆಂಬರ್ 18ರಂದು ಹಾದಿ ಸಾವನ್ನಪ್ಪಿದರು. ಹಾದಿ ತೀವ್ರಗಾಮಿ ವೇದಿಕೆಯ ಇಂಕ್ವಿಲಾಬ್ ಮೊಂಚೊದ ಪ್ರಮುಖ ವ್ಯಕ್ತಿಯಾಗಿದ್ದರು.

ಹಾದಿ ಅವರ ನಿಧನವನ್ನು ಘೋಷಿಸಿದ ಬಾಂಗ್ಲಾದೇಶದ ಮಧ್ಯಂತರ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್, ಒಂದು ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದರು ಮತ್ತು ದೇಶಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಆಯೋಜಿಸಲು ಆದೇಶಿಸಿದ್ದರು.

ಹಾದಿ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಢಾಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...