Homeಅಂತರಾಷ್ಟ್ರೀಯಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು, ಅವರ ಏಳು ವರ್ಷದ ಮಗಳು ಸಜೀವ ದಹನಗೊಂಡಿದ್ದಾರೆ. ಇತರ ಇಬ್ಬರು ಹೆಣ್ಣುಮಕ್ಕಳು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬಿಎನ್‌ಪಿ ನಾಯಕ ಬಿಲಾಲ್ ಹುಸೈನ್ ಅವರ ಲಕ್ಷ್ಮಿಪುರದ ಮನೆಗೆ ಶನಿವಾರ ಮುಂಜಾನೆ ಬೆಂಕಿ ಹಚ್ಚಲಾಗಿದೆ.

ಹುಸೈನ್ ಭಬಾನಿಗಂಜ್ ಯೂನಿಯನ್ ಬಿಎನ್‌ಪಿಯ ಸಹಾಯಕ ಸಂಘಟನಾ ಕಾರ್ಯದರ್ಶಿ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಹುಸೈನ್ ಅವರ ಪುತ್ರಿ ಆಯಿಷಾ ಅಕ್ತರ್ ಸುಟ್ಟು ಕರಕಲಾಗಿದ್ದು, ಅವರ ಇನ್ನಿಬ್ಬರು ಪುತ್ರಿಯರಾದ ಸಲ್ಮಾ ಅಕ್ತರ್ (16) ಮತ್ತು ಸಮಿಯಾ ಅಕ್ತರ್ (14) ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಬಿಲಾಲ್ ಅವರು ಲಕ್ಷ್ಮಿಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪುತ್ರಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಢಾಕಾಗೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಷರೀಫ್ ಉಸ್ಮಾನ್ ಹಾದಿ ಸಿಂಗಾಪುರದಲ್ಲಿ ನಿಧನರಾದರು ಎಂಬ ಸುದ್ದಿ ಹೊರಬಿದ್ದ ನಂತರ, ಕಳೆದ ಗುರುವಾರ ರಾತ್ರಿ ರಾಜಧಾನಿ ಢಾಕಾ ಸೇರಿದಂತೆ ಬಾಂಗ್ಲಾದೇಶದ ಹಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಡೈಲಿ ಸ್ಟಾರ್ ಮತ್ತು ಪ್ರೋಥೋಮ್ ಅಲೋ ಕಟ್ಟಡಗಳಿಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದಾರೆ. ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರ ಮನೆ ‘ಧನ್ಮೊಂಡಿ 32’ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.

ರಾಜ್‌ಶಾಹಿ ಮತ್ತು ಚಿತ್ತಗಾಂಗ್‌ನಲ್ಲಿ ಭಾರತೀಯ ರಾಯಭಾರ ಕಚೇರಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ.

‘ಹಾದಿ’ ‘ಭಾರತೀಯ ಆಧಿಪತ್ಯ’ ಎಂದು ಕರೆಯುತ್ತಿದ್ದದ್ದಕ್ಕೆ ವಿರುದ್ಧವಾಗಿ ತೀವ್ರವಾದ ನಿಲುವುಗಳಿಗೆ ಹೆಸರಾಗಿದ್ದರು. ಅವರನ್ನು ಗುಂಡಿಟ್ಟು ಕೊಂದವರು ದಾಳಿಯ ನಂತರ ಭಾರತಕ್ಕೆ ಆಗಮಿಸಿದ್ದಾರೆ ಆರೋಪಿಸಲಾಗಿದೆ. ಆದರೆ, ಈ ಆರೋಪಕ್ಕೆ ಇದುವರೆಗೆ ಅಧಿಕಾರಿಗಳು ಯಾವುದೇ ದೃಢವಾದ ಪುರಾವೆಗಳನ್ನು ನೀಡಿಲ್ಲ.

ಅಶಾಂತಿ ಹರಡುತ್ತಿದ್ದಂತೆ, ಕನಿಷ್ಠ ಒಂದು ಕೋಮು ಘಟನೆ ವರದಿಯಾಗಿದೆ. ಪೊಲೀಸರ ಪ್ರಕಾರ, ಮೈಮೆನ್‌ಸಿಂಗ್‌ನಲ್ಲಿ ದೇವದೂಷಣೆಯ ಆರೋಪದ ಮೇಲೆ ಗುಂಪೊಂದು ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದಿದೆ.

ಡಿಸೆಂಬರ್ 12ರಂದು ಮಧ್ಯ ಢಾಕಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಹಾದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ವಿಮಾನದಲ್ಲಿ ಸಾಗಿಸಲಾಗಿತ್ತು. ಡಿಸೆಂಬರ್ 18ರಂದು ಹಾದಿ ಸಾವನ್ನಪ್ಪಿದರು. ಹಾದಿ ತೀವ್ರಗಾಮಿ ವೇದಿಕೆಯ ಇಂಕ್ವಿಲಾಬ್ ಮೊಂಚೊದ ಪ್ರಮುಖ ವ್ಯಕ್ತಿಯಾಗಿದ್ದರು.

ಹಾದಿ ಅವರ ನಿಧನವನ್ನು ಘೋಷಿಸಿದ ಬಾಂಗ್ಲಾದೇಶದ ಮಧ್ಯಂತರ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್, ಒಂದು ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದರು ಮತ್ತು ದೇಶಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಆಯೋಜಿಸಲು ಆದೇಶಿಸಿದ್ದರು.

ಹಾದಿ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಢಾಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...