Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...