Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...