Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...