Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...