Homeಮುಖಪುಟಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಐದು ಮೈತ್ರಿ ಪಕ್ಷದ ಸಂಸದರೊಂದಿಗೆ ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಬುಧವಾರ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ವಯನಾಡ್‌ನ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಸಂಭಾಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಿಯೋಗದಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿ ಉಸ್ತುವಾರಿ ಅವಿನಾಶ್ ಪಾಂಡೆ ಕೂಡ ಇರುತ್ತಾರೆ ಎಂದು ಪಕ್ಷವು ಪಿಟಿಐಗೆ ತಿಳಿಸಿದೆ. ಸೋಮವಾರದಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರ ನಿಯೋಗ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯಲಾಗಿತ್ತು. ಡಿಸೆಂಬರ್ 10ರವರೆಗೆ ಈ ಪ್ರದೇಶಕ್ಕೆ ಹೊರಗಿನವರು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಹಿಂಸಾಚಾರ ಪೀಡಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಭಾಲ್‌ನ ಸುಮಾರು 500 ವರ್ಷಗಳ ಹಳೆಯ ಮಸೀದಿಯಿರುವ ಸ್ಥಳದಲ್ಲಿ ಹರಿಹರ ದೇವಾಲಯ ಇತ್ತು ಪ್ರತಿಪಾದಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾದ ನಂತರ ನವೆಂಬರ್ 19 ರಿಂದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಸೀದಿಯ ಸಮೀಕ್ಷೆ ನಡೆಸುವ ವೇಳೆ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ಉಂಟಾದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ನಡುವೆ, ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು ಮಂಗಳವಾರ ಸದನದಿಂದ ಸಂಕ್ಷಿಪ್ತವಾಗಿ ಹೊರನಡೆದಿವೆ. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಸಭೆ ಸೇರಿದ ತಕ್ಷಣ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಎದ್ದುನಿಂತು ವಿಷಯ ಪ್ರಸ್ತಾಪಿಸಿ, ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದ್ದರು.

“ಇದು ತುಂಬಾ ಗಂಭೀರವಾದ ವಿಷಯ. ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆದರೆ, ಇದಕ್ಕೆ ಅನುಮತಿ ನೀಡದ ಸ್ಪೀಕರ್‌, ಶೂನ್ಯವೇಳೆಯಲ್ಲಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿದರು. ಇದನ್ನು ಪ್ರತಿಭಟಿಸಿದ ಅಖಿಲೇಶ್ ಯಾದವ್ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ಸದನದಿಂದ ಹೊರನಡೆಯಲು ಪ್ರಾರಂಭಿಸಿದರು.

ಇದನ್ನೂ ಓದಿ: ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...