Homeಮುಖಪುಟಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಐದು ಮೈತ್ರಿ ಪಕ್ಷದ ಸಂಸದರೊಂದಿಗೆ ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಬುಧವಾರ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ವಯನಾಡ್‌ನ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಸಂಭಾಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಿಯೋಗದಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿ ಉಸ್ತುವಾರಿ ಅವಿನಾಶ್ ಪಾಂಡೆ ಕೂಡ ಇರುತ್ತಾರೆ ಎಂದು ಪಕ್ಷವು ಪಿಟಿಐಗೆ ತಿಳಿಸಿದೆ. ಸೋಮವಾರದಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರ ನಿಯೋಗ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯಲಾಗಿತ್ತು. ಡಿಸೆಂಬರ್ 10ರವರೆಗೆ ಈ ಪ್ರದೇಶಕ್ಕೆ ಹೊರಗಿನವರು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಹಿಂಸಾಚಾರ ಪೀಡಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಭಾಲ್‌ನ ಸುಮಾರು 500 ವರ್ಷಗಳ ಹಳೆಯ ಮಸೀದಿಯಿರುವ ಸ್ಥಳದಲ್ಲಿ ಹರಿಹರ ದೇವಾಲಯ ಇತ್ತು ಪ್ರತಿಪಾದಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾದ ನಂತರ ನವೆಂಬರ್ 19 ರಿಂದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಸೀದಿಯ ಸಮೀಕ್ಷೆ ನಡೆಸುವ ವೇಳೆ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ಉಂಟಾದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ನಡುವೆ, ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು ಮಂಗಳವಾರ ಸದನದಿಂದ ಸಂಕ್ಷಿಪ್ತವಾಗಿ ಹೊರನಡೆದಿವೆ. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಸಭೆ ಸೇರಿದ ತಕ್ಷಣ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಎದ್ದುನಿಂತು ವಿಷಯ ಪ್ರಸ್ತಾಪಿಸಿ, ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದ್ದರು.

“ಇದು ತುಂಬಾ ಗಂಭೀರವಾದ ವಿಷಯ. ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆದರೆ, ಇದಕ್ಕೆ ಅನುಮತಿ ನೀಡದ ಸ್ಪೀಕರ್‌, ಶೂನ್ಯವೇಳೆಯಲ್ಲಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿದರು. ಇದನ್ನು ಪ್ರತಿಭಟಿಸಿದ ಅಖಿಲೇಶ್ ಯಾದವ್ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ಸದನದಿಂದ ಹೊರನಡೆಯಲು ಪ್ರಾರಂಭಿಸಿದರು.

ಇದನ್ನೂ ಓದಿ: ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...