Homeಮುಖಪುಟಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ

ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ

- Advertisement -
- Advertisement -

ಕಳೆದ ಡಿಸೆಂಬರ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕೊಲ್ಲಲ್ಪಟ್ಟ, ಬುಲಂದ್‌ಶಹರ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪಿಗಳಿಗೆ ಸಿಕ್ಕಿರುವ ವೀರರ ಸ್ವಾಗತ ದೊಡ್ಡ ವಿಷಯವೇನಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಈ ಪ್ರಕರಣದ 33 ಆರೋಪಿಗಳ ಪೈಕಿ ಏಳು ಮಂದಿಯನ್ನು ಕಳೆದ ವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆಗ ಅವರನ್ನು ಬಲಪಂಥೀಯ ಕಾರ್ಯಕರ್ತರು ಹೂಮಾಲೆ ಹಾಕಿ ಮತ್ತು “ಜೈ ಶ್ರೀ ರಾಮ್, ವಂದೇ ಮಾತರಂ” ಘೋಷಣೆ ಕೂಗಿ ಸ್ವಾಗತಿಸಿದ್ದರು.

ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾದವರಲ್ಲಿ ಸ್ಥಳೀಯ ಬಿಜೆಪಿ ಯುವ ವಿಭಾಗದ ಮಾಜಿ ಮುಖ್ಯಸ್ಥ ಶಿಖರ್ ಅಗರ್ವಾಲ್, ಬಲಪಂಥೀಯ ಗುಂಪಿನ ಭಾಗವಾಗಿರುವ ಹೇಮು ಮತ್ತು ಉಪೇಂದ್ರ ರಾಘವ್, ಮಾಜಿ ಸೇನಾ ವ್ಯಕ್ತಿ ಜೀತು ಫೌಜಿ, ಸೌರವ್ ಮತ್ತು ರೋಹಿತ್ ರಾಘವ್ ಸೇರಿದ್ದಾರೆ. ಸ್ಥಳೀಯ ವರದಿಗಾರರಿಂದ ಚಿತ್ರೀಕರಿಸಲ್ಪಟ್ಟ ಈ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ನಂತರ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

“ಜೈಲಿನಿಂದ ಬಿಡುಗಡೆಯಾದ ಜನರ ಬೆಂಬಲಿಗರು ಅವರನ್ನು ಸ್ವಾಗತಿಸಿದರೆ, ಸರ್ಕಾರ ಮತ್ತು ಬಿಜೆಪಿ ಏನು ಮಾಡಲಾಗುವುದಿಲ್ಲ ಮತ್ತು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಪ್ರತಿಪಕ್ಷಗಳು ಇದನ್ನು ದೊಡ್ಡ ವಿಷಯ ಮಾಡಬಾರದು ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೆ.ಪಿ.ಮೌರಿಯಾ ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಹತ್ತಿರದ ಅರಣ್ಯ ಪ್ರದೇಶದಲ್ಲಿ 25 ಹಸುಗಳ ಮೃತದೇಹಗಳು ಪತ್ತೆಯಾದ ನಂತರ ಗ್ರಾಮದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಅವರ ಮೇಲಿದೆ.

ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರು ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಹಲ್ಲೆ ನಡೆಸಿದರು. ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಕೊಡಲಿಯಿಂದ ಅವರ ಎರಡು ಬೆರಳುಗಳನ್ನು ಕತ್ತರಿಸಿ ತಲೆಗೆ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದರು.

ದಾಳಿಯ ನಂತರ ಸಿಕ್ಕಿದ ಸೆಲ್ ಫೋನ್ ವಿಡಿಯೋದಲ್ಲಿ ಜನಸಮೂಹವು “ಗೋಲಿ ಮಾರೊ” (ಗುಂಡು ಹಾರಿಸಿ) ಎಂದು ಕೂಗುತ್ತಿರುವುದನ್ನು ಕಂಡುಬಂದಿದೆ.

ಎಸ್.ಐ.ಟಿ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದರು. ನಂತರ ಐವರು ಪುರುಷರ ಮೇಲೆ ಕೊಲೆ ಆರೋಪ ಮತ್ತು 33 ಮಂದಿ ಹಿಂಸಾಚಾರ ಮತ್ತು ಅಗ್ನಿಸ್ಪರ್ಶವನ್ನು ಪ್ರಚೋದಿಸಿದ ಆರೋಪ ಹೊರಿಸಲಾಯಿತು. 38 ಆರೋಪಿಗಳ ವಿರುದ್ಧ ಎಸ್‌ಐಟಿ 3,400 ಪುಟಗಳ ಕೇಸ್ ಡೈರಿ ಮತ್ತು 103 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...