Homeಕರ್ನಾಟಕಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

- Advertisement -
- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಬಾರಿಕೆರೆಯ ಕೊರಗ ಕಾಲನಿಯಲ್ಲಿ ಮಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ನುಗ್ಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ಶಾಂತಿ ಭಂಗ ಉಂಟಾದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರಗ ಕಾಲನಿಯಲ್ಲಿ ರಾಜೇಶ್‌ ಎಂಬವರ ಮದುವೆಯ ಪ್ರಯುಕ್ತ ಸೋಮವಾರ ರಾತ್ರಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಅಲ್ಲಿ ಡಿಜೆ ಅಳವಡಿಸಲಾಗಿದ್ದು, ರಾತ್ರಿಯವರೆಗೂ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಆಗಮಿಸಿದ ಪೊಲೀಸರು ಮಹಿಳೆ, ಮಕ್ಕಳು ಎಂದು ನೋಡದೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ದೂರಲಾಗಿದೆ. ಜೊತೆಗೆ ಮದುಮಗನ ಮೇಲೆ ಕೂಡಾ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಿಕರು ದೂರಿದ್ದು, ಅವರ ಕೈಗೆ ಗಾಯವಾಗಿದೆ.

ಇದನ್ನೂ ಓದಿ:ಆತ್ಮವನ್ನೇ ಕಳೆದುಕೊಂಡ ವರ್ತಮಾನ ಮತ್ತು ಆದಿವಾಸಿಗಳು

“ಮೆಹಂದಿ ಕಾರ್ಯಕ್ರಮ ಸ್ಥಳೀಯರಿಗೆ ಕಿರಿಕಿರಿ ಉಂಟಾದ್ದರಿಂದ ಕೋಟ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಟ ಠಾಣಾಧಿಕಾರಿ ಸಂತೋಷ್ ಬಿಪಿ ನೇತೃತ್ವ ತಂಡವು ಸ್ಥಳಕ್ಕೆ ತೆರಳಿ ಡಿಜೆ ಬಂದ್ ಮಾಡುವಂತೆ ತಿಳಿಸಿದ್ದರು ಎಂದು ಹೇಳಲಾಗುತ್ತಿದ್ದು, ಇದರಿಂದ ಕೋಪಗೊಂಡ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ‘ಎಲ್ಲಾ ಕಡೆ ಮೆಹಂದಿ ಕಾರ್ಯಕ್ರಮ ನಡೆಯುತ್ತದೆ, ಅವರಿಗೆ ಏನು ಹೇಳಲ್ಲ ಆದ್ರೆ ನಮ್ಮ ಸಮುದಾಕ್ಕೆ ಏಕೆ ಅಡ್ಡಿ ಪಡಿಸುತ್ತೀರಿ? ನಮಗೊಂದು ನ್ಯಾಯ ಬೇರೆಯವರಿಗೊಂದು ನ್ಯಾಯವೆ’ ಎಂದು ಪೊಲೀಸರೊಂದಿಗೆ ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ” ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.

“ಇದರ ನಂತರ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿರುವುದಾಗಿ ದೂರಲಾಗಿದೆ. ಘಟನೆಯನ್ನು ಖಂಡಿಸಿದ ಕೊರಗ ಸಮುದಾಯದವರು ರಾತ್ರಿ ಕೋಟ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ವಶಪಡಿಸಿಕೊಂಡವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ:ಕೊರಗರ ಹಕ್ಕೊತ್ತಾಯಗಳಿಗಾಗಿ ರಾಜಿರಹಿತವಾಗಿ ದುಡಿಯುತ್ತಿರುವ ಹೋರಾಟಗಾರ್ತಿ ಸುಶೀಲ ನಾಡ

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಬೊಬ್ಬೆ ಹೊಡೆಯುತ್ತಾ ಓಡಾಡುತ್ತಿರುವುದು ಅದರಲ್ಲಿ ಕಂಡು ಬಂದಿದೆ. ಜೊತೆಗೆ ಘಟನೆಯನ್ನು ವಿಡಿಯೊ ಮಾಡುತ್ತಿದ್ದ ವ್ಯಕ್ತಿಯನ್ನೂ ಪೊಲೀಸರು ಬೆನ್ನಟ್ಟಿದ್ದಾರೆ. ಮಹಿಳೆಯರು ಪೊಲೀಸರೊಂದಿಗೆ ಗೊಗೆರೆಯುತ್ತಿರುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ.

ಮತ್ತೊಂದು ವಿಡಿಯೊದಲ್ಲಿ ಮಹಿಳೆಯೊಬ್ಬರ ತಲೆ ಏಟಾಗಿರುವುದು ತೋರಿಸಿದ್ದಾರೆ. ಜೊತೆಗೆ ಮಹಿಳೆಯು, ನಾವು ಪೊಲೀಸರ ಕಾಲಿಗೆ ಬಿದ್ದರೂ ಅವರು ನಮ್ಮ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಲಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ಬರುವ ಹೊತ್ತಿಗೆ ಹತ್ತುವರೆ ಗಂಟೆ ಕೂಡಾ ಆಗಿರಲಿಲ್ಲ ಎಂದು ಮಹಿಳೆ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ.

“ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕೊರಗ ಸಮುದಾಯದವರಿಗೆ ನ್ಯಾಯ ಒದಗಿಸುತ್ತೇನೆ. ತಪ್ಪಿತಸ್ಥರ ಮೇಲೆ ಕ್ರಮ ಕೈ ಗೊಳ್ಳುತ್ತೇನೆ” ಎಂದು ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹೇಳಿದ್ದಾರೆ ಎಂದು ವಾರ್ತಾಭಾರತಿ ಬರೆದಿದೆ.

ಇದನ್ನೂ ಓದಿ:ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

“ಕೋಟ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಹೆಂಗಸು, ಮಕ್ಕಳು ನೋಡದೆ ಏಕಾಏಕಿ ಲಾಠಿ ಚಾರ್ಜ್ ಮಾಡಿ ಹಲ್ಲೆ ಮಾಡಿದ್ದಾರೆ. ಇದರಿಂದ ಹಲವರಿಗೆ ಗಾಯಗಳಾಗಿದೆ. ಈ ಹಲ್ಲೆಯನ್ನು ದಲಿತ ಸಂಘರ್ಷ ಸಮಿತಿ ಬಲವಾಗಿ ಖಂಡಿಸುತ್ತದೆ. ಅಲ್ಲದೆ ಠಾಣಾಧಿಕಾರಿಯನ್ನು ಅಮಾನತುಗೊಳಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದಲಿತ ಸಂಘರ್ಷದ ಮುಖಂಡ ಶಾಮ್ ಸುಂದರ್ ತೆಕ್ಕಟ್ಟೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಕರಾವಳಿ ಜಿಲ್ಲೆಗಳಲ್ಲಿ ಮದುವೆ, ಮೆಹಂದಿಗಳಲ್ಲಿ ಡಿ ಜೆ ಕುಣಿತ ಅಬ್ಬರದಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ, ಕೊರಗ ಕುಟುಂಬವೊಂದು ಮೆಹಂದಿಗೆ ಡಿ ಜೆ ಹಾಕಿಸಿದಾಗ ದೂರೂ ಹೋಗುತ್ತದೆ, ಪೊಲೀಸರು ಮದುವೆ ಮನೆಗೆ ನುಗ್ಗಿ ಲಾಠಿ ಚಾರ್ಜೂ ಮಾಡುತ್ತಾರೆ. ಬಡವರು, ದಲಿತರು ಅಂದರೆ ಎಷ್ಟೊಂದು ತಾತ್ಸಾರ !. ಈ ಪೊಲೀಸರನ್ನು ತಕ್ಷಣ ಅಟ್ರಾಸಿಟಿ ಅಡಿ ಮೊಕದ್ದಮೆ ಹೂಡಿ ಬಂಧಿಸಬೇಕು” ಎಂದು ಹೇಳಿದ್ದಾರೆ.

“ಮೆಹಂದಿ ಕಾರ್ಯಕ್ರಮಕ್ಕೆ ನಾವು ಅಡ್ಡಿ ಪಡಿಸಿಲ್ಲ. ಡಿಜೆ ಶಬ್ದದಿಂದ ತೊಂದರೆ ಆಗುತ್ತಿದೆ ಎಂದು ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಡಿಜೆಯ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದೇವೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಮಾಡದಿದ್ದಾಗ ನಾನು ಸಿಬ್ಬಂದಿಗಳೊಂದಿಗೆ ತೆರಳಿ ಡಿಜೆ ಬಂದ್ ಮಾಡಲು ವಿನಂತಿಸಿದ್ದೆ. ಅದಕ್ಕೆ ಕೆಲವರು ಉಡಾಫೆ ಉತ್ತರ ನೀಡಿ, ‘ಬಂದ್ ಮಾಡಲ್ಲ ಏನು ಬೇಕಾದ್ರು ಮಾಡಿಕೊಳ್ಳಿ’ ಎಂದು ಹೇಳಿದರು. ಅದಕ್ಕೆ ಅವರನ್ನು ವಶಕ್ಕೆ ಪಡೆಯುವಾಗ ಜನರು ತಲ್ಲಾಟ ಮಾಡಿದ್ದಾರೆ. ಅದು ಬಿಟ್ಟು ಯಾವುದೇ ಪೊಲೀಸ್ ದೌರ್ಜನ್ಯ ನಡೆದಿಲ್ಲ” ಎಂದು ಕೊರಗ ಕಾಲನಿ ನಿವಾಸಿಗಳ ಅರೊಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ:ಅಂಚಿಗೆ ತಳ್ಳಲ್ಪಟ್ಟ ತುಳುನಾಡಿನ ನಿಜ ವಾರಸುದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...