Homeಕರ್ನಾಟಕಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

- Advertisement -
- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಬಾರಿಕೆರೆಯ ಕೊರಗ ಕಾಲನಿಯಲ್ಲಿ ಮಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ನುಗ್ಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ಶಾಂತಿ ಭಂಗ ಉಂಟಾದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರಗ ಕಾಲನಿಯಲ್ಲಿ ರಾಜೇಶ್‌ ಎಂಬವರ ಮದುವೆಯ ಪ್ರಯುಕ್ತ ಸೋಮವಾರ ರಾತ್ರಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಅಲ್ಲಿ ಡಿಜೆ ಅಳವಡಿಸಲಾಗಿದ್ದು, ರಾತ್ರಿಯವರೆಗೂ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಆಗಮಿಸಿದ ಪೊಲೀಸರು ಮಹಿಳೆ, ಮಕ್ಕಳು ಎಂದು ನೋಡದೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ದೂರಲಾಗಿದೆ. ಜೊತೆಗೆ ಮದುಮಗನ ಮೇಲೆ ಕೂಡಾ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಿಕರು ದೂರಿದ್ದು, ಅವರ ಕೈಗೆ ಗಾಯವಾಗಿದೆ.

ಇದನ್ನೂ ಓದಿ:ಆತ್ಮವನ್ನೇ ಕಳೆದುಕೊಂಡ ವರ್ತಮಾನ ಮತ್ತು ಆದಿವಾಸಿಗಳು

“ಮೆಹಂದಿ ಕಾರ್ಯಕ್ರಮ ಸ್ಥಳೀಯರಿಗೆ ಕಿರಿಕಿರಿ ಉಂಟಾದ್ದರಿಂದ ಕೋಟ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಟ ಠಾಣಾಧಿಕಾರಿ ಸಂತೋಷ್ ಬಿಪಿ ನೇತೃತ್ವ ತಂಡವು ಸ್ಥಳಕ್ಕೆ ತೆರಳಿ ಡಿಜೆ ಬಂದ್ ಮಾಡುವಂತೆ ತಿಳಿಸಿದ್ದರು ಎಂದು ಹೇಳಲಾಗುತ್ತಿದ್ದು, ಇದರಿಂದ ಕೋಪಗೊಂಡ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ‘ಎಲ್ಲಾ ಕಡೆ ಮೆಹಂದಿ ಕಾರ್ಯಕ್ರಮ ನಡೆಯುತ್ತದೆ, ಅವರಿಗೆ ಏನು ಹೇಳಲ್ಲ ಆದ್ರೆ ನಮ್ಮ ಸಮುದಾಕ್ಕೆ ಏಕೆ ಅಡ್ಡಿ ಪಡಿಸುತ್ತೀರಿ? ನಮಗೊಂದು ನ್ಯಾಯ ಬೇರೆಯವರಿಗೊಂದು ನ್ಯಾಯವೆ’ ಎಂದು ಪೊಲೀಸರೊಂದಿಗೆ ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ” ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.

“ಇದರ ನಂತರ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿರುವುದಾಗಿ ದೂರಲಾಗಿದೆ. ಘಟನೆಯನ್ನು ಖಂಡಿಸಿದ ಕೊರಗ ಸಮುದಾಯದವರು ರಾತ್ರಿ ಕೋಟ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ವಶಪಡಿಸಿಕೊಂಡವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ:ಕೊರಗರ ಹಕ್ಕೊತ್ತಾಯಗಳಿಗಾಗಿ ರಾಜಿರಹಿತವಾಗಿ ದುಡಿಯುತ್ತಿರುವ ಹೋರಾಟಗಾರ್ತಿ ಸುಶೀಲ ನಾಡ

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಬೊಬ್ಬೆ ಹೊಡೆಯುತ್ತಾ ಓಡಾಡುತ್ತಿರುವುದು ಅದರಲ್ಲಿ ಕಂಡು ಬಂದಿದೆ. ಜೊತೆಗೆ ಘಟನೆಯನ್ನು ವಿಡಿಯೊ ಮಾಡುತ್ತಿದ್ದ ವ್ಯಕ್ತಿಯನ್ನೂ ಪೊಲೀಸರು ಬೆನ್ನಟ್ಟಿದ್ದಾರೆ. ಮಹಿಳೆಯರು ಪೊಲೀಸರೊಂದಿಗೆ ಗೊಗೆರೆಯುತ್ತಿರುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ.

ಮತ್ತೊಂದು ವಿಡಿಯೊದಲ್ಲಿ ಮಹಿಳೆಯೊಬ್ಬರ ತಲೆ ಏಟಾಗಿರುವುದು ತೋರಿಸಿದ್ದಾರೆ. ಜೊತೆಗೆ ಮಹಿಳೆಯು, ನಾವು ಪೊಲೀಸರ ಕಾಲಿಗೆ ಬಿದ್ದರೂ ಅವರು ನಮ್ಮ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಲಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ಬರುವ ಹೊತ್ತಿಗೆ ಹತ್ತುವರೆ ಗಂಟೆ ಕೂಡಾ ಆಗಿರಲಿಲ್ಲ ಎಂದು ಮಹಿಳೆ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ.

“ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕೊರಗ ಸಮುದಾಯದವರಿಗೆ ನ್ಯಾಯ ಒದಗಿಸುತ್ತೇನೆ. ತಪ್ಪಿತಸ್ಥರ ಮೇಲೆ ಕ್ರಮ ಕೈ ಗೊಳ್ಳುತ್ತೇನೆ” ಎಂದು ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹೇಳಿದ್ದಾರೆ ಎಂದು ವಾರ್ತಾಭಾರತಿ ಬರೆದಿದೆ.

ಇದನ್ನೂ ಓದಿ:ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

“ಕೋಟ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಹೆಂಗಸು, ಮಕ್ಕಳು ನೋಡದೆ ಏಕಾಏಕಿ ಲಾಠಿ ಚಾರ್ಜ್ ಮಾಡಿ ಹಲ್ಲೆ ಮಾಡಿದ್ದಾರೆ. ಇದರಿಂದ ಹಲವರಿಗೆ ಗಾಯಗಳಾಗಿದೆ. ಈ ಹಲ್ಲೆಯನ್ನು ದಲಿತ ಸಂಘರ್ಷ ಸಮಿತಿ ಬಲವಾಗಿ ಖಂಡಿಸುತ್ತದೆ. ಅಲ್ಲದೆ ಠಾಣಾಧಿಕಾರಿಯನ್ನು ಅಮಾನತುಗೊಳಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದಲಿತ ಸಂಘರ್ಷದ ಮುಖಂಡ ಶಾಮ್ ಸುಂದರ್ ತೆಕ್ಕಟ್ಟೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಕರಾವಳಿ ಜಿಲ್ಲೆಗಳಲ್ಲಿ ಮದುವೆ, ಮೆಹಂದಿಗಳಲ್ಲಿ ಡಿ ಜೆ ಕುಣಿತ ಅಬ್ಬರದಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ, ಕೊರಗ ಕುಟುಂಬವೊಂದು ಮೆಹಂದಿಗೆ ಡಿ ಜೆ ಹಾಕಿಸಿದಾಗ ದೂರೂ ಹೋಗುತ್ತದೆ, ಪೊಲೀಸರು ಮದುವೆ ಮನೆಗೆ ನುಗ್ಗಿ ಲಾಠಿ ಚಾರ್ಜೂ ಮಾಡುತ್ತಾರೆ. ಬಡವರು, ದಲಿತರು ಅಂದರೆ ಎಷ್ಟೊಂದು ತಾತ್ಸಾರ !. ಈ ಪೊಲೀಸರನ್ನು ತಕ್ಷಣ ಅಟ್ರಾಸಿಟಿ ಅಡಿ ಮೊಕದ್ದಮೆ ಹೂಡಿ ಬಂಧಿಸಬೇಕು” ಎಂದು ಹೇಳಿದ್ದಾರೆ.

“ಮೆಹಂದಿ ಕಾರ್ಯಕ್ರಮಕ್ಕೆ ನಾವು ಅಡ್ಡಿ ಪಡಿಸಿಲ್ಲ. ಡಿಜೆ ಶಬ್ದದಿಂದ ತೊಂದರೆ ಆಗುತ್ತಿದೆ ಎಂದು ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಡಿಜೆಯ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದೇವೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಮಾಡದಿದ್ದಾಗ ನಾನು ಸಿಬ್ಬಂದಿಗಳೊಂದಿಗೆ ತೆರಳಿ ಡಿಜೆ ಬಂದ್ ಮಾಡಲು ವಿನಂತಿಸಿದ್ದೆ. ಅದಕ್ಕೆ ಕೆಲವರು ಉಡಾಫೆ ಉತ್ತರ ನೀಡಿ, ‘ಬಂದ್ ಮಾಡಲ್ಲ ಏನು ಬೇಕಾದ್ರು ಮಾಡಿಕೊಳ್ಳಿ’ ಎಂದು ಹೇಳಿದರು. ಅದಕ್ಕೆ ಅವರನ್ನು ವಶಕ್ಕೆ ಪಡೆಯುವಾಗ ಜನರು ತಲ್ಲಾಟ ಮಾಡಿದ್ದಾರೆ. ಅದು ಬಿಟ್ಟು ಯಾವುದೇ ಪೊಲೀಸ್ ದೌರ್ಜನ್ಯ ನಡೆದಿಲ್ಲ” ಎಂದು ಕೊರಗ ಕಾಲನಿ ನಿವಾಸಿಗಳ ಅರೊಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ:ಅಂಚಿಗೆ ತಳ್ಳಲ್ಪಟ್ಟ ತುಳುನಾಡಿನ ನಿಜ ವಾರಸುದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...