Homeಕರ್ನಾಟಕಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

- Advertisement -
- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಬಾರಿಕೆರೆಯ ಕೊರಗ ಕಾಲನಿಯಲ್ಲಿ ಮಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ನುಗ್ಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ಶಾಂತಿ ಭಂಗ ಉಂಟಾದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರಗ ಕಾಲನಿಯಲ್ಲಿ ರಾಜೇಶ್‌ ಎಂಬವರ ಮದುವೆಯ ಪ್ರಯುಕ್ತ ಸೋಮವಾರ ರಾತ್ರಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಅಲ್ಲಿ ಡಿಜೆ ಅಳವಡಿಸಲಾಗಿದ್ದು, ರಾತ್ರಿಯವರೆಗೂ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಆಗಮಿಸಿದ ಪೊಲೀಸರು ಮಹಿಳೆ, ಮಕ್ಕಳು ಎಂದು ನೋಡದೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ದೂರಲಾಗಿದೆ. ಜೊತೆಗೆ ಮದುಮಗನ ಮೇಲೆ ಕೂಡಾ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಿಕರು ದೂರಿದ್ದು, ಅವರ ಕೈಗೆ ಗಾಯವಾಗಿದೆ.

ಇದನ್ನೂ ಓದಿ:ಆತ್ಮವನ್ನೇ ಕಳೆದುಕೊಂಡ ವರ್ತಮಾನ ಮತ್ತು ಆದಿವಾಸಿಗಳು

“ಮೆಹಂದಿ ಕಾರ್ಯಕ್ರಮ ಸ್ಥಳೀಯರಿಗೆ ಕಿರಿಕಿರಿ ಉಂಟಾದ್ದರಿಂದ ಕೋಟ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಟ ಠಾಣಾಧಿಕಾರಿ ಸಂತೋಷ್ ಬಿಪಿ ನೇತೃತ್ವ ತಂಡವು ಸ್ಥಳಕ್ಕೆ ತೆರಳಿ ಡಿಜೆ ಬಂದ್ ಮಾಡುವಂತೆ ತಿಳಿಸಿದ್ದರು ಎಂದು ಹೇಳಲಾಗುತ್ತಿದ್ದು, ಇದರಿಂದ ಕೋಪಗೊಂಡ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ‘ಎಲ್ಲಾ ಕಡೆ ಮೆಹಂದಿ ಕಾರ್ಯಕ್ರಮ ನಡೆಯುತ್ತದೆ, ಅವರಿಗೆ ಏನು ಹೇಳಲ್ಲ ಆದ್ರೆ ನಮ್ಮ ಸಮುದಾಕ್ಕೆ ಏಕೆ ಅಡ್ಡಿ ಪಡಿಸುತ್ತೀರಿ? ನಮಗೊಂದು ನ್ಯಾಯ ಬೇರೆಯವರಿಗೊಂದು ನ್ಯಾಯವೆ’ ಎಂದು ಪೊಲೀಸರೊಂದಿಗೆ ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ” ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.

“ಇದರ ನಂತರ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿರುವುದಾಗಿ ದೂರಲಾಗಿದೆ. ಘಟನೆಯನ್ನು ಖಂಡಿಸಿದ ಕೊರಗ ಸಮುದಾಯದವರು ರಾತ್ರಿ ಕೋಟ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ವಶಪಡಿಸಿಕೊಂಡವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ:ಕೊರಗರ ಹಕ್ಕೊತ್ತಾಯಗಳಿಗಾಗಿ ರಾಜಿರಹಿತವಾಗಿ ದುಡಿಯುತ್ತಿರುವ ಹೋರಾಟಗಾರ್ತಿ ಸುಶೀಲ ನಾಡ

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಬೊಬ್ಬೆ ಹೊಡೆಯುತ್ತಾ ಓಡಾಡುತ್ತಿರುವುದು ಅದರಲ್ಲಿ ಕಂಡು ಬಂದಿದೆ. ಜೊತೆಗೆ ಘಟನೆಯನ್ನು ವಿಡಿಯೊ ಮಾಡುತ್ತಿದ್ದ ವ್ಯಕ್ತಿಯನ್ನೂ ಪೊಲೀಸರು ಬೆನ್ನಟ್ಟಿದ್ದಾರೆ. ಮಹಿಳೆಯರು ಪೊಲೀಸರೊಂದಿಗೆ ಗೊಗೆರೆಯುತ್ತಿರುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ.

ಮತ್ತೊಂದು ವಿಡಿಯೊದಲ್ಲಿ ಮಹಿಳೆಯೊಬ್ಬರ ತಲೆ ಏಟಾಗಿರುವುದು ತೋರಿಸಿದ್ದಾರೆ. ಜೊತೆಗೆ ಮಹಿಳೆಯು, ನಾವು ಪೊಲೀಸರ ಕಾಲಿಗೆ ಬಿದ್ದರೂ ಅವರು ನಮ್ಮ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಲಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ಬರುವ ಹೊತ್ತಿಗೆ ಹತ್ತುವರೆ ಗಂಟೆ ಕೂಡಾ ಆಗಿರಲಿಲ್ಲ ಎಂದು ಮಹಿಳೆ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ.

“ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕೊರಗ ಸಮುದಾಯದವರಿಗೆ ನ್ಯಾಯ ಒದಗಿಸುತ್ತೇನೆ. ತಪ್ಪಿತಸ್ಥರ ಮೇಲೆ ಕ್ರಮ ಕೈ ಗೊಳ್ಳುತ್ತೇನೆ” ಎಂದು ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹೇಳಿದ್ದಾರೆ ಎಂದು ವಾರ್ತಾಭಾರತಿ ಬರೆದಿದೆ.

ಇದನ್ನೂ ಓದಿ:ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

“ಕೋಟ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಹೆಂಗಸು, ಮಕ್ಕಳು ನೋಡದೆ ಏಕಾಏಕಿ ಲಾಠಿ ಚಾರ್ಜ್ ಮಾಡಿ ಹಲ್ಲೆ ಮಾಡಿದ್ದಾರೆ. ಇದರಿಂದ ಹಲವರಿಗೆ ಗಾಯಗಳಾಗಿದೆ. ಈ ಹಲ್ಲೆಯನ್ನು ದಲಿತ ಸಂಘರ್ಷ ಸಮಿತಿ ಬಲವಾಗಿ ಖಂಡಿಸುತ್ತದೆ. ಅಲ್ಲದೆ ಠಾಣಾಧಿಕಾರಿಯನ್ನು ಅಮಾನತುಗೊಳಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದಲಿತ ಸಂಘರ್ಷದ ಮುಖಂಡ ಶಾಮ್ ಸುಂದರ್ ತೆಕ್ಕಟ್ಟೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಕರಾವಳಿ ಜಿಲ್ಲೆಗಳಲ್ಲಿ ಮದುವೆ, ಮೆಹಂದಿಗಳಲ್ಲಿ ಡಿ ಜೆ ಕುಣಿತ ಅಬ್ಬರದಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ, ಕೊರಗ ಕುಟುಂಬವೊಂದು ಮೆಹಂದಿಗೆ ಡಿ ಜೆ ಹಾಕಿಸಿದಾಗ ದೂರೂ ಹೋಗುತ್ತದೆ, ಪೊಲೀಸರು ಮದುವೆ ಮನೆಗೆ ನುಗ್ಗಿ ಲಾಠಿ ಚಾರ್ಜೂ ಮಾಡುತ್ತಾರೆ. ಬಡವರು, ದಲಿತರು ಅಂದರೆ ಎಷ್ಟೊಂದು ತಾತ್ಸಾರ !. ಈ ಪೊಲೀಸರನ್ನು ತಕ್ಷಣ ಅಟ್ರಾಸಿಟಿ ಅಡಿ ಮೊಕದ್ದಮೆ ಹೂಡಿ ಬಂಧಿಸಬೇಕು” ಎಂದು ಹೇಳಿದ್ದಾರೆ.

“ಮೆಹಂದಿ ಕಾರ್ಯಕ್ರಮಕ್ಕೆ ನಾವು ಅಡ್ಡಿ ಪಡಿಸಿಲ್ಲ. ಡಿಜೆ ಶಬ್ದದಿಂದ ತೊಂದರೆ ಆಗುತ್ತಿದೆ ಎಂದು ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಡಿಜೆಯ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದೇವೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಮಾಡದಿದ್ದಾಗ ನಾನು ಸಿಬ್ಬಂದಿಗಳೊಂದಿಗೆ ತೆರಳಿ ಡಿಜೆ ಬಂದ್ ಮಾಡಲು ವಿನಂತಿಸಿದ್ದೆ. ಅದಕ್ಕೆ ಕೆಲವರು ಉಡಾಫೆ ಉತ್ತರ ನೀಡಿ, ‘ಬಂದ್ ಮಾಡಲ್ಲ ಏನು ಬೇಕಾದ್ರು ಮಾಡಿಕೊಳ್ಳಿ’ ಎಂದು ಹೇಳಿದರು. ಅದಕ್ಕೆ ಅವರನ್ನು ವಶಕ್ಕೆ ಪಡೆಯುವಾಗ ಜನರು ತಲ್ಲಾಟ ಮಾಡಿದ್ದಾರೆ. ಅದು ಬಿಟ್ಟು ಯಾವುದೇ ಪೊಲೀಸ್ ದೌರ್ಜನ್ಯ ನಡೆದಿಲ್ಲ” ಎಂದು ಕೊರಗ ಕಾಲನಿ ನಿವಾಸಿಗಳ ಅರೊಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ:ಅಂಚಿಗೆ ತಳ್ಳಲ್ಪಟ್ಟ ತುಳುನಾಡಿನ ನಿಜ ವಾರಸುದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...