Homeಮುಖಪುಟಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

ಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಹಿಂಸೆ ಅನಿವಾರ್ಯವಾಗುತ್ತದೆ ಎಂದು ಹೇಳಿರುವ ಆರೆಸ್ಸೆಸ್‌ ಹಿರಿಯ ನಾಯಕ ಭಯ್ಯಾಜಿ ಜೋಶಿ, ಅದಾಗ್ಯೂ, ಭಾರತವೂ ಎಲ್ಲರನ್ನು ಶಾಂತಿಯ ಪಥದಲ್ಲಿ ಕೊಂಡೊಯ್ಯಬೇಕೆಂದು ಎಂದು ಹೇಳಿದ್ದಾರೆ. ಈ ಹಿಂದೆಯೂ ಅವರು ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ಗುಜರಾತ್ ವಿಶ್ವವಿದ್ಯಾನಿಲಯದ ಆವರಣದ ಮೈದಾನದಲ್ಲಿ ನಡೆದ ಹಿಂದೂ ಸ್ಪಿರಿಚ್ಯುವಲ್ & ಸರ್ವಿಸ್ ಫೇರ್ ಅಥವಾ ಹಿಂದೂ ಆಧ್ಯಾತ್ಮಿಕ ಸೇವಾ ಮೇಳವನ್ನು ಉದ್ದೇಶಿಸಿ ಮಾತನಾಡುತ್ತಾ ಭಯ್ಯಾಜಿ ಜೋಶಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಂದೂಗಳು ಎಂದಿಗೂ ತಮ್ಮ ಧರ್ಮವನ್ನು ರಕ್ಷಿಸಲು ಬದ್ಧರಾಗಿರಬೇಕು. ನಾವು ನಮ್ಮ ಧರ್ಮವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಇತರರು ಯಾವುದನ್ನು ‘ಅಧರ್ಮ’ ಎಂದು ಕರೆಯುತ್ತಾರೋ ಅದನ್ನೇ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಕೂಡಾ ಹಾಗೆಯೇ ಮಾಡಿರುವುದು” ಎಂದು ಅವರು ಹೇಳಿದ್ದಾರೆ.

ಮಹಾಭಾರತವನ್ನು ಉಲ್ಲೇಖಿಸಿದ ಅವರು, “ಪಾಂಡವರು ಅಧರ್ಮವನ್ನು ನಾಶ ಮಾಡಲು ಯುದ್ಧದ ನೀತಿಯನ್ನು ಕೈಗೊಂಡರು. ಹಿಂದೂ ಧರ್ಮ ಅಹಿಂಸೆ ಸಾರುತ್ತದೆ ಎಂಬುದನ್ನು ನಾವು ಅಲ್ಲಗಳೆಯಲಾಗದು. ಆದರೆ ಕೆಲವೊಮ್ಮೆ ಅಹಿಂಸೆಯ ರಕ್ಷಣೆಗಾಗಿ ಹಿಂಸೆಯ ಹಾದಿ ತುಳಿಯಬೇಕಾಗುತ್ತದೆ. ಇಲ್ಲವಾದರೆ ಅಹಿಂಸೆ ತತ್ವವು ಸುರಕ್ಷಿತವಾಗಿರದು. ನಮ್ಮ ಪೂರ್ವಜರು ಈ ಸಂದೇಶವನ್ನು ನಮಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಭಾರತವನ್ನು ಹೊರತುಪಡಿಸಿ ಇತರೆ ದೇಶಗಳ ಜೊತೆಯಲ್ಲೇ ಸಾಗುವಂತಹ ಯಾವುದೇ ದೇಶವಿಲ್ಲ. ವಸುದೈವ ಕುಟುಂಬಂ ಎಂಬುದು ನಮ್ಮ ಆಧ್ಯಾತ್ಮದ ತತ್ವವಾಗಿದೆ. ನಾವು ಇಡೀ ವಿಶ್ವವನ್ನೇ ಒಂದು ಕುಟುಂಬವಾಗಿ ಪರಿಗಣಿಸಿದರೆ ಯಾವುದೇ ಸಂಘರ್ಷ ಇರುವುದಿಲ್ಲ” ಎಂದು ಭಯ್ಯಾಜಿ ಜೋಶಿ ಹೇಳಿದ್ದಾರೆ.

“ನಾವು ಭಾರತ ಬಲಿಷ್ಠವಾಗಬೇಕು ಎನ್ನುತ್ತೇವೆ. ಅಂದರೆ ಬಲಿಷ್ಠ ಭಾರತ ಮತ್ತು ಬಲಿಷ್ಠ ಹಿಂದೂ ಸಮುದಾಯ ಮಾತ್ರ ಎಲ್ಲರಿಗೂ ಉಪಯೋಗಕರ ಎಂಬ ಭರವಸೆಯನ್ನು ಜಗತ್ತಿಗೆ ನೀಡುವುದಾಗಿದೆ. ನಾವು ಬಲಿಷ್ಠರಾದರೆ ದುರ್ಬಲರು ಮತ್ತು ಧಮನಿತರನ್ನು ರಕ್ಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಯ್ಯಾಜಿ ಜೋಶಿ ಈ ಹಿಂದೆ ಕೂಡಾ ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿಂದೆ, ಹಿಂದೂ ಮತ್ತು ಹಿಂದುತ್ವ ಎರಡೂ ಕೂಡಾ ಒಂದೇ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದನ್ನೂಓದಿ:  ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...