Homeಮುಖಪುಟಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

ಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಹಿಂಸೆ ಅನಿವಾರ್ಯವಾಗುತ್ತದೆ ಎಂದು ಹೇಳಿರುವ ಆರೆಸ್ಸೆಸ್‌ ಹಿರಿಯ ನಾಯಕ ಭಯ್ಯಾಜಿ ಜೋಶಿ, ಅದಾಗ್ಯೂ, ಭಾರತವೂ ಎಲ್ಲರನ್ನು ಶಾಂತಿಯ ಪಥದಲ್ಲಿ ಕೊಂಡೊಯ್ಯಬೇಕೆಂದು ಎಂದು ಹೇಳಿದ್ದಾರೆ. ಈ ಹಿಂದೆಯೂ ಅವರು ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ಗುಜರಾತ್ ವಿಶ್ವವಿದ್ಯಾನಿಲಯದ ಆವರಣದ ಮೈದಾನದಲ್ಲಿ ನಡೆದ ಹಿಂದೂ ಸ್ಪಿರಿಚ್ಯುವಲ್ & ಸರ್ವಿಸ್ ಫೇರ್ ಅಥವಾ ಹಿಂದೂ ಆಧ್ಯಾತ್ಮಿಕ ಸೇವಾ ಮೇಳವನ್ನು ಉದ್ದೇಶಿಸಿ ಮಾತನಾಡುತ್ತಾ ಭಯ್ಯಾಜಿ ಜೋಶಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಂದೂಗಳು ಎಂದಿಗೂ ತಮ್ಮ ಧರ್ಮವನ್ನು ರಕ್ಷಿಸಲು ಬದ್ಧರಾಗಿರಬೇಕು. ನಾವು ನಮ್ಮ ಧರ್ಮವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಇತರರು ಯಾವುದನ್ನು ‘ಅಧರ್ಮ’ ಎಂದು ಕರೆಯುತ್ತಾರೋ ಅದನ್ನೇ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಕೂಡಾ ಹಾಗೆಯೇ ಮಾಡಿರುವುದು” ಎಂದು ಅವರು ಹೇಳಿದ್ದಾರೆ.

ಮಹಾಭಾರತವನ್ನು ಉಲ್ಲೇಖಿಸಿದ ಅವರು, “ಪಾಂಡವರು ಅಧರ್ಮವನ್ನು ನಾಶ ಮಾಡಲು ಯುದ್ಧದ ನೀತಿಯನ್ನು ಕೈಗೊಂಡರು. ಹಿಂದೂ ಧರ್ಮ ಅಹಿಂಸೆ ಸಾರುತ್ತದೆ ಎಂಬುದನ್ನು ನಾವು ಅಲ್ಲಗಳೆಯಲಾಗದು. ಆದರೆ ಕೆಲವೊಮ್ಮೆ ಅಹಿಂಸೆಯ ರಕ್ಷಣೆಗಾಗಿ ಹಿಂಸೆಯ ಹಾದಿ ತುಳಿಯಬೇಕಾಗುತ್ತದೆ. ಇಲ್ಲವಾದರೆ ಅಹಿಂಸೆ ತತ್ವವು ಸುರಕ್ಷಿತವಾಗಿರದು. ನಮ್ಮ ಪೂರ್ವಜರು ಈ ಸಂದೇಶವನ್ನು ನಮಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಭಾರತವನ್ನು ಹೊರತುಪಡಿಸಿ ಇತರೆ ದೇಶಗಳ ಜೊತೆಯಲ್ಲೇ ಸಾಗುವಂತಹ ಯಾವುದೇ ದೇಶವಿಲ್ಲ. ವಸುದೈವ ಕುಟುಂಬಂ ಎಂಬುದು ನಮ್ಮ ಆಧ್ಯಾತ್ಮದ ತತ್ವವಾಗಿದೆ. ನಾವು ಇಡೀ ವಿಶ್ವವನ್ನೇ ಒಂದು ಕುಟುಂಬವಾಗಿ ಪರಿಗಣಿಸಿದರೆ ಯಾವುದೇ ಸಂಘರ್ಷ ಇರುವುದಿಲ್ಲ” ಎಂದು ಭಯ್ಯಾಜಿ ಜೋಶಿ ಹೇಳಿದ್ದಾರೆ.

“ನಾವು ಭಾರತ ಬಲಿಷ್ಠವಾಗಬೇಕು ಎನ್ನುತ್ತೇವೆ. ಅಂದರೆ ಬಲಿಷ್ಠ ಭಾರತ ಮತ್ತು ಬಲಿಷ್ಠ ಹಿಂದೂ ಸಮುದಾಯ ಮಾತ್ರ ಎಲ್ಲರಿಗೂ ಉಪಯೋಗಕರ ಎಂಬ ಭರವಸೆಯನ್ನು ಜಗತ್ತಿಗೆ ನೀಡುವುದಾಗಿದೆ. ನಾವು ಬಲಿಷ್ಠರಾದರೆ ದುರ್ಬಲರು ಮತ್ತು ಧಮನಿತರನ್ನು ರಕ್ಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಯ್ಯಾಜಿ ಜೋಶಿ ಈ ಹಿಂದೆ ಕೂಡಾ ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿಂದೆ, ಹಿಂದೂ ಮತ್ತು ಹಿಂದುತ್ವ ಎರಡೂ ಕೂಡಾ ಒಂದೇ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದನ್ನೂಓದಿ:  ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...