Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...