Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...