Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...