Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...