Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...