Homeಮುಖಪುಟಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

ಜಾಮಿಯ ವಿವಿ ಹಿಂಸೆ ; ಡಿ.15ರ ಕರಾಳ ದಿನ, ಪುಸ್ತಕ ಮನೆಯಲ್ಲಿ ಪೊಲೀಸರ ಪುಂಡಾಟಿಕೆ

- Advertisement -
- Advertisement -

ಫೆಬ್ರವರಿ 15ರ ನಂತರ ದೆಹಲಿಯ ಜಾಮಿಯಾ ವಿವಿಯ ಹಳೆ ಗ್ರಂಥಾಲಯದಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯವರು ಪುಂಡರಂತೆ ವರ್ತಿಸಿದ ಸಿಸಿಟಿವಿ ವಿಡಿಯೋಗಳು ಹೊರಬೀಳತೊಡಗಿವೆ. ಒಂದಕ್ಕೊಂದು ವಿಡಿಯೋಗಳು ಭಯಾನಕವಾಗಿದ್ದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಲ್ಲೆ ಮೀರಿರುವುದನ್ನು ತೋರಿಸುತ್ತಿವೆ.

ಎಸ್‌ಐಟಿಯವರು ಮಾಧ್ಯಮಗಳಿಗೆ ಒಂದು ಕ್ಲಿಪ್ಪಿಂಗ್ ನೀಡಿ, ವಿದ್ಯಾರ್ಥಿಯೋರ್ವನ ಕೈಲ್ಲಿ ಕಲ್ಲಿದ್ದವು, ಅದಕ್ಕಾಗಿ ನಾವು ಹಲ್ಲೆ ಮಾಡಬೇಕಾಯಿತು ಎಂದು ಪ್ರಚಾರ ಮಾಡಲು ಯತ್ನಿಸಿದರು. ಅದು ಕಲ್ಲಲ್ಲ ವಾಲೆಟ್ ಎಂಬುದನ್ನು ಅಲ್ಟ್ ನ್ಯೂಸ್ ಸೂಕ್ಷ್ಮ ಪರಿಶೀಲನೆ ಮೂಲಕ ತೋರಿಸಿದೆ.


ಇದನ್ನೂ ಓದಿ: ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..


ಈಗ ದಿ ಕ್ವಿಂಟ್ 4 ಸಿಸಿಟಿವಿ ಕ್ಯಾಮೆರಾಗಳಿಂದ ಹೆಕ್ಕಿದ 4 ಹೊಸ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ದೇಶದ ಮುಂದೆ ಇಟ್ಟಿದೆ. ಫ್ಯಾಸಿಸ್ಟ್ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ವ್ಯವಸ್ಥೆ ಗೂಂಡಾಗಳ ಲೆವೆಲ್‌ಗೆ ಇಳಿದಿರುವುದಕ್ಕೆ ಇದು ಸಾಕ್ಷ್ಯದಂತಿದೆ. ವಿಡಿಯೋ ನೋಡಿ.

Jamia Violence: 4 New CCTV Footage Show Police Beating Students, Breaking CCTV

Amid uproar over CCTV footage showing police brutality on campus, The Quint got exclusive access to 4 new CCTV footage that show police beating up students and breaking CCTV cameras in Jamia library. The cops can also be seen vandalising the university's property. Watch the video for more.Click here to read: https://bit.ly/2vD4s1b

Posted by The Quint on Monday, February 17, 2020

ಕ್ಯಾಮೆರಾ 1
ಗ್ರಂಥಾಲಯದ ರೀಡಿಂಗ್ ರೂಮ್‌ನಲ್ಲಿ ಪೊಲೀಸರು ಮತ್ತು ಪ್ಯಾರಾ ಮಿಲಿಟರಿಯವರು ವಿದ್ಯಾರ್ಥಿಗಳನ್ನು ಮನ ಬಂದಂತೆ ಲಾಠಿಗಳಿಂದ ಥಳಿಸುತ್ತಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿಗಳು ಎದ್ದು ಬಿದ್ದು ಓಡುತ್ತಿದ್ದಾರೆ. ಪೊಲೀಸನೊಬ್ಬ ಸಿಸಿಟಿವಿ ಕ್ಯಾಮೆರಾಕ್ಕೆ ಲಾಠಿಯಿಂದ ಹೊಡೆದು ಅದನ್ನು ಸ್ಥಗಿತಗೊಳಿಸುತ್ತಾನೆ.

ಕ್ಯಾಮೆರಾ 2
ವಿವಿಯ ಹಳೆ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ನಡೆದ ಘಟನೆಗಳನ್ನು ನೋಡಬಹುದು. ಪೊಲೀಸರು ವಿದ್ಯಾರ್ಥಿಗಳಿಗೆ ಲಾಠಿಯಿಂದ ಥಳಿಸುವುದನ್ನು ಮತ್ತು ಕ್ಯಾಮೆರಾ ಒಡೆಯುವುದನ್ನು ಕಾಣಬಹುದು.

ಕ್ಯಾಮೆರಾ 3
ಹಳೆ ಗ್ರಂಥಾಲಯದ ರೀಡಿಂಗ್ ರೂಮಿನಲ್ಲಿ ಪೊಲೀಸನೊಬ್ಬ ಟೇಬಲ್ ಒಡೆಯುವುದನ್ನು, ಅದರ ತುಂಡನ್ನು ಲಾಠಿಯಂತೆ ಬಳಸುವುದನ್ನು ಕಾಣಬಹುದು. ಇನ್ನೊಬ್ಬ ಪೊಲೀಸ್ ಲಾಠಿಯಿಂದ ಕ್ಯಾಮೆರಾ ಒಡೆಯಲು ಯತ್ನಿಸುವ, ನಂತರ ಕ್ಯಾಮೆರಾದತ್ತ ಕುರ್ಚಿಯೊಂದನ್ನು ಎಸೆಯುವ ದೃಶ್ಯ ನೋಡಬಹುದು.

ಕ್ಯಾಮೆರಾ 4
ರೀಡಿಂಗ್ ಹಾಲ್‌ನಲ್ಲಿ ಪೊಲೀಸರು ಟೇಬಲ್ ಹಿಂದುಗಡೆಯಿಂದ ವಿದ್ಯಾರ್ಥಿಗಳನ್ನು ಎಳೆದು ಹೊಡೆಯುವ ದೃಶ್ಯವಿದೆ. ಒಬ್ಬ ವಿದ್ಯಾರ್ಥಿ ತನ್ನ ಟೇಬಲ್ ಬಿಡದೇ ಪಟ್ಟು ಹಿಡಿಯುವ ದೃಶ್ಯವಿದೆ.


ಇದನ್ನೂ ಒದಿ: ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...