Homeಮುಖಪುಟಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

ಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

- Advertisement -
- Advertisement -

ಕೊನೆಯ ಮತ್ತು ಏಳನೇ ಹಂತದ ಚುನಾವಣೆ ಹಿನ್ನೆಲೆ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ 1 ಕ್ಷೇತ್ರ ಸೇರಿ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ಪ.ಬಂಗಾಳದ 9 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪ.ಬಂಗಾಳದ ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನತೆ ನಡೆದಿದೆ.

ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್(ಐಎಸ್‌ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿದೆ. ಕಚ್ಚಾ ಬಾಂಬ್‌ ಗಳನ್ನು ಎಸೆದಿರುವ ಪರಿಣಾಮ ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ, ಆಕ್ರೋಶಿತ ಜನಸಮೂಹವು ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು(ಇವಿಎಂ) ಮತ್ತು ವಿವಿಪ್ಯಾಟ್‌ ಮೆಷಿನ್‌ ತೆಗೆದುಕೊಂಡು ಪಕ್ಕದ ಕೊಳಕ್ಕೆ ಎಸೆದಿದ್ದಾರೆ. ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ ನಂತರ ಈ ಘಟನೆ ಸಂಭವಿಸಿದೆ. ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಸೆಕ್ಟರ್‌ನ ಎಲ್ಲಾ ಆರು ಬೂತ್‌ಗಳಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಹೊಸ ಇವಿಎಂಗಳನ್ನು ಸೆಕ್ಟರ್ ಅಧಿಕಾರಿಗೆ ಒದಗಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಬಸಿರ್‌ಹತ್ ಲೋಕಸಭೆ ವ್ಯಾಪ್ತಿಯ ಸಂದೇಶ್‌ಖಾಲಿಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಸ್ಥಳೀಯ ಮಹಿಳೆಯರು ಬಿದಿರಿನ ಕೋಲುಗಳನ್ನು ಹಿಡಿದುಕೊಂಡು ತೃಣಮೂಲ ಕಾಂಗ್ರೆಸ್  ಕಾರ್ಯಕರ್ತರು ಮತ್ತು ಪೊಲೀಸರ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇಟ್ಖೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿದ್ದರಿಂದ, ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಮಾಧ್ಯಮದ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಪ್ರತಿಭಟನೆಯ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರನ್ನು ಬೆದರಿಸಲು ಪಕ್ಷದ ಗೂಂಡಾಗಳು ಮತ್ತು ರಾಜ್ಯ ಪೊಲೀಸರನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾಂಗಾರ್‌ನಲ್ಲಿ ಟಿಎಂಸಿ ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ (ಎಐಎಸ್‌ಎಫ್) ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದೆ, ಈ ವೇಳೆ ಎಐಎಸ್‌ಎಫ್ ಮಹಿಳಾ ಕಾರ್ಯಕರ್ತೆ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳು ಎಐಎಸ್‌ಎಫ್ ಅಭ್ಯರ್ಥಿ ನೂರ್ ಆಲಂ ಖಾನ್ ಅವರ ವಾಹನವನ್ನು ಧ್ವಂಸಗೊಳಿಸಿದ್ದಾರೆ.

ದಮ್‌ದಮ್‌, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ, ಡೈಮಂದ್ ಹಾರ್ಬರ್, ಜಾದವ್‌ಪುರ, ಕೋಲ್ಕತ್ತಾ ದಕ್ಷಿಣ ಮತ್ತು ಕೋಲ್ಕತ್ತಾ ಉತ್ತರ ಸೇರಿದಂತೆ ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಸ್ಥಾನಗಳಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ಅಡಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ, ಆದರೂ ಹಲವೆಡೆ ಹಿಂಸಾಚಾರ ವರದಿಯಾಗಿರುವುದು ವಿಪರ್ಯಾಸವಾಗಿದೆ.

ಇದನ್ನು ಓದಿ: ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...