Homeದಲಿತ್ ಫೈಲ್ಸ್ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಊರಿನಲ್ಲಿ ದಲಿತರ ದೇವಾಸ್ಥಾನ ಪ್ರವೇಶ ಕೂಡ ನಿಷೇಧಿಸಲಾಗಿದೆ.

- Advertisement -
- Advertisement -

ತನ್ನ ಸ್ನೇಹಿತನೊಡನೆ ಊರಿನ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕವಾಗಿ ಥಳಿಸಿಲಾಗಿದೆ. ದಲಿತರ ವಿರುದ್ಧ ಜಾತಿನಿಂದನೆ ಮಾಡಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲ್ಲೂಕಿನ ಅಣ್ಣೂರು-ಹೊಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಊರಿನ ಪರಿಶಿಷ್ಟ ಜಾತಿಗೆ ಸೇರಿದ 29 ವರ್ಷದ ಮಹೇಶ್ ಎಂಬ ಯುವಕನು ತನ್ನ ಸ್ನೇಹತ ಸುರೇಶ್ ಎಂಬುವವರ ಜೊತೆ ಊರಿನ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಊರಿನ ಕೆಲವರು ಈ ರಸ್ತೆಯಲ್ಲಿ ದಲಿತರು ಬರಬೇಡಿ ಎಂದು ತಾಕೀತು ಮಾಡಿದ್ದಾರೆ. ಈ ರಸ್ತೆಯಲ್ಲಿ ಏಕೆ ಬರಬಾರದು? ಬೇರೆ ಯಾವ ರಸ್ತೆಯಲ್ಲಿ ಹೋಗಬೇಕು ಎಂದು ಮಹೇಶ್ ಪ್ರಶ್ನಿಸಿದ್ದಕ್ಕೆ ಗುಂಪೊಂದು ಜಾತಿನಿಂದನೆ ಮಾಡಿ, ತೀವ್ರವಾಗಿ ಥಳಿಸಲಾಗಿದೆ.

ಈ ಕುರಿತು ಪ್ರಕರಣ ದಾಖಲಾಗಿದ್ದು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 11 ಜನರ ವಿರುದ್ದ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

5 ವರ್ಷದ ಹಿಂದೆ ದೇವಾಲಯ ಪ್ರವೇಶಕ್ಕೆ ತಡೆ

5 ವರ್ಷದ ಹಿಂದೆ ಊರಿನಲ್ಲಿ ಮಹಾದೇವ ದೇವಾಲಯ ನಿರ್ಮಾಣ ಕೆಲಸ ಆರಂಭವಾಗಿತ್ತು. ಸುಮಾರು 300 ಕುಟುಂಬಗಳು ಇರುವ ಊರಿನಲ್ಲಿ 40 ದಲಿತ ಕುಟುಂಬಗಳಿದ್ದು ದಲಿತರೂ ಸೇರಿದಂತೆ ಎಲ್ಲರೂ ದೇವಾಲಯ ನಿರ್ಮಾಣಕ್ಕೆ ಚಂದಾ ನೀಡಿದ್ದಾರೆ. ಆದರೆ ದೇವಾಲಯ ನಿರ್ಮಾಣವಾದ ನಂತರ ಲಿಂಗಾಯತ ಜಾತಿಯ ಮುಖಂಡರು ದಲಿತರು ದೇವಾಲಯ ಪ್ರವೇಶ ಮಾಡಬಾರದೆಂದು ತಾಕೀತು ಮಾಡಿದ್ದರು. ಆಗ ಕೆಲ ದಲಿತ ಯುವಕರು ಅದನ್ನು ಪ್ರಶ್ನಿಸಿದ್ದಾಗ ಜಗಳ ನಡೆದು ವಿವಾದವಾಗಿತ್ತು. ಅದು ಈಗ ದೇವಾಲಯವಿರುವ ರಸ್ತೆಯನ್ನು ಬಳಸಬೇಡಿ ಎನ್ನುವಷ್ಟರ ಮಟ್ಟಿಗೆ ಅಸ್ಪೃಶ್ಯತೆ ಆಚರಿಸಲಾಗುತ್ತಿದೆ ಎಂದು ಸಂತ್ರಸ್ತ ಮಹೇಶ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ನೋವು ತೋಡಿಕೊಂಡಿದ್ದಾರೆ.

ಇಂದಿಗೂ ಹಲವಾರು ಜನ ದಲಿತರು ಆ ರಸ್ತೆಯಲ್ಲಿ ಓಡಾಡುವುದಿಲ್ಲ. ಆದರೆ ನಾನು ಆ ರಸ್ತೆ ಬಳಸಬಾರದೆಂಬುದನ್ನು ಒಪ್ಪದೆ ರಸ್ತೆಯಲ್ಲಿ ಬಂದಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ನಂತರ ಗ್ರಾಮಕ್ಕೆ ಎಸ್‌ಪಿ ಚೇತನ್, ಹುಣಸೂರು ಡಿವೈಎಸ್‌ಪಿ ರವಿಪ್ರಸಾದ್ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ; ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...