Homeಮುಖಪುಟಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಭಾಷಣ ಮಾಡಿ ಬಂದ ಮರುದಿನವೇ ಭಾನುವಾರ (ಸೆ.14) ಮಣಿಪುರದ ಚುರಚಂದ್‌ಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆ ಮಾಡಲಾಗಿದ್ದ ಅಲಂಕಾರವನ್ನು ಹಾನಿ ಮಾಡಿದ್ದಕ್ಕಾಗಿ ಈ ವಾರದ ಆರಂಭದಲ್ಲಿ ಬಂಧಿಸಲಾದ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

ಭಾನುವಾರ ಮಧ್ಯಾಹ್ನ ಸ್ಥಳೀಯರ ಗುಂಪೊಂದು ಬಂಧಿತ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕುಕಿ-ಝೋ ಸಮುದಾಯ ಹೆಚ್ಚಾಗಿ ವಾಸಿಸುವ ಚುರಚಂದ್‌ಪುರ ಜಿಲ್ಲೆಯ ಕೇಂದ್ರ ಸ್ಥಾನ ಚುರಚಂದ್‌ಪುರ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ಪ್ರಾರಂಭಿಸಿತ್ತು.

ಹಿರಿಯ ಭದ್ರತಾ ಅಧಿಕಾರಿಯೊಬ್ಬರ ಪ್ರಕಾರ, ಪ್ರತಿಭಟನಾಕಾರರು ಚುರಚಂದ್‌ಪುರ ಪೊಲೀಸ್ ಠಾಣೆಗೆ ನುಗ್ಗಲು ಪ್ರಯತ್ನಿಸಿದ್ದರು. ಪ್ರತಿಭಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಆರ್‌ಎಎಫ್ ಸಿಬ್ಬಂದಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಂಧಿತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಭಾನುವಾರ ಸಂಜೆಯ ವೇಳೆಗೆ ಅವರನ್ನು ಬಿಡುಗಡೆ ಮಾಡಲು ಸೂಚಿಸಿದ್ದಾರೆ ಎಂದು ಅಧಿಕಾರಿಗಳನ್ನುಉಲ್ಲೇಖಿಸಿ ವರದಿ ಹೇಳಿದೆ.

“ಪ್ರತಿಭಟನಾ ನಿರತರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಕಾನೂನು ಮಾರ್ಗಗಳ ಮೂಲಕ ಇಬ್ಬರ ಬಿಡುಗಡೆಗೆ ಪ್ರಯತ್ನಿಸುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ನಂತರ, ಪ್ರತಿಭಟನಾಕಾರರು ವಕೀಲರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಸಂಜೆಯ ವೇಳೆಗೆ ಇಬ್ಬರಿಗೆ ಜಾಮೀನು ನೀಡಿದ್ದಾರೆ. ಆ ಬಳಿಕ ಪರಿಸ್ಥಿತಿ ಶಾಂತವಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮುನ್ನ ಗುರುವಾರ ರಾತ್ರಿ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಪ್ರಧಾನಿ ಭೇಟಿ ಹಿನ್ನೆಲೆ ಹಾಕಲಾಗಿದ್ದ ಕೆಲವು ಅಲಂಕಾರಿಕ ವಸ್ತುಗಳನ್ನು ನಾಶ ಮಾಡಿರುವುದು ಈ ಘಟನೆ ಕಾರಣ. ಆಲಂಕಾರಿಕ ವಸ್ತುಗಳನ್ನು ನಾಶ ಮಾಡಿದ್ದಲ್ಲದೆ ಪಿಯರ್ಸನ್‌ಮನ್ ಪ್ರದೇಶದಲ್ಲಿ ಗುಂಪೊಂದು ಬೆಂಕಿ ಹಚ್ಚಿತ್ತು. ಅದನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗುರುವಾರ ರಾತ್ರಿಯ ಉದ್ವಿಗ್ನತೆಯ ನಂತರ, ಚುರಚಂದ್‌ಪುರ ಪಟ್ಟಣದ ವಿವಿಧ ನಾಗರಿಕ ಸಂಘಟನೆಗಳು ಶಾಂತಿಗೆ ಕರೆ ನೀಡಿತ್ತು. ಆ ಬಳಿಕ ಪಟ್ಟಣದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಪ್ರಧಾನಿಯ ಭೇಟಿಯ ದಿನವಾದ ಶನಿವಾರ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...