Homeಮುಖಪುಟಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಭಾಷಣ ಮಾಡಿ ಬಂದ ಮರುದಿನವೇ ಭಾನುವಾರ (ಸೆ.14) ಮಣಿಪುರದ ಚುರಚಂದ್‌ಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆ ಮಾಡಲಾಗಿದ್ದ ಅಲಂಕಾರವನ್ನು ಹಾನಿ ಮಾಡಿದ್ದಕ್ಕಾಗಿ ಈ ವಾರದ ಆರಂಭದಲ್ಲಿ ಬಂಧಿಸಲಾದ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

ಭಾನುವಾರ ಮಧ್ಯಾಹ್ನ ಸ್ಥಳೀಯರ ಗುಂಪೊಂದು ಬಂಧಿತ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕುಕಿ-ಝೋ ಸಮುದಾಯ ಹೆಚ್ಚಾಗಿ ವಾಸಿಸುವ ಚುರಚಂದ್‌ಪುರ ಜಿಲ್ಲೆಯ ಕೇಂದ್ರ ಸ್ಥಾನ ಚುರಚಂದ್‌ಪುರ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ಪ್ರಾರಂಭಿಸಿತ್ತು.

ಹಿರಿಯ ಭದ್ರತಾ ಅಧಿಕಾರಿಯೊಬ್ಬರ ಪ್ರಕಾರ, ಪ್ರತಿಭಟನಾಕಾರರು ಚುರಚಂದ್‌ಪುರ ಪೊಲೀಸ್ ಠಾಣೆಗೆ ನುಗ್ಗಲು ಪ್ರಯತ್ನಿಸಿದ್ದರು. ಪ್ರತಿಭಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಆರ್‌ಎಎಫ್ ಸಿಬ್ಬಂದಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಂಧಿತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಭಾನುವಾರ ಸಂಜೆಯ ವೇಳೆಗೆ ಅವರನ್ನು ಬಿಡುಗಡೆ ಮಾಡಲು ಸೂಚಿಸಿದ್ದಾರೆ ಎಂದು ಅಧಿಕಾರಿಗಳನ್ನುಉಲ್ಲೇಖಿಸಿ ವರದಿ ಹೇಳಿದೆ.

“ಪ್ರತಿಭಟನಾ ನಿರತರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಕಾನೂನು ಮಾರ್ಗಗಳ ಮೂಲಕ ಇಬ್ಬರ ಬಿಡುಗಡೆಗೆ ಪ್ರಯತ್ನಿಸುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ನಂತರ, ಪ್ರತಿಭಟನಾಕಾರರು ವಕೀಲರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಸಂಜೆಯ ವೇಳೆಗೆ ಇಬ್ಬರಿಗೆ ಜಾಮೀನು ನೀಡಿದ್ದಾರೆ. ಆ ಬಳಿಕ ಪರಿಸ್ಥಿತಿ ಶಾಂತವಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮುನ್ನ ಗುರುವಾರ ರಾತ್ರಿ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಪ್ರಧಾನಿ ಭೇಟಿ ಹಿನ್ನೆಲೆ ಹಾಕಲಾಗಿದ್ದ ಕೆಲವು ಅಲಂಕಾರಿಕ ವಸ್ತುಗಳನ್ನು ನಾಶ ಮಾಡಿರುವುದು ಈ ಘಟನೆ ಕಾರಣ. ಆಲಂಕಾರಿಕ ವಸ್ತುಗಳನ್ನು ನಾಶ ಮಾಡಿದ್ದಲ್ಲದೆ ಪಿಯರ್ಸನ್‌ಮನ್ ಪ್ರದೇಶದಲ್ಲಿ ಗುಂಪೊಂದು ಬೆಂಕಿ ಹಚ್ಚಿತ್ತು. ಅದನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗುರುವಾರ ರಾತ್ರಿಯ ಉದ್ವಿಗ್ನತೆಯ ನಂತರ, ಚುರಚಂದ್‌ಪುರ ಪಟ್ಟಣದ ವಿವಿಧ ನಾಗರಿಕ ಸಂಘಟನೆಗಳು ಶಾಂತಿಗೆ ಕರೆ ನೀಡಿತ್ತು. ಆ ಬಳಿಕ ಪಟ್ಟಣದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಪ್ರಧಾನಿಯ ಭೇಟಿಯ ದಿನವಾದ ಶನಿವಾರ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...