Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....