Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...