Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...