Homeಕರ್ನಾಟಕರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

ರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

- Advertisement -
- Advertisement -

ಉತ್ತರಪ್ರದೇಶದಲ್ಲಿ ಕಳೆದ ತಿಂಗಳಿನಿಂದ ಮಕ್ಕಳನ್ನು ಕಾಡುತ್ತಿರುವ ವೈರಲ್ ಜ್ವರ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ನೂರಾರು ಮಕ್ಕಳು ಈ ವೈರಾಣು ಸೋಂಕು ಮತ್ತು ಡೆಂಗ್ಯೂನಿಂದ ಬಳಲುತ್ತಿವೆ ಎಂದು ವರದಿಯಾಗಿದೆ.

ಯಾದಗಿರಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ಬೆಂಗಳೂರು, ಗದಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರಿನ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಯಾದಗಿರಿ ಮತ್ತು ಗದಗದಲ್ಲಿ ಹೆಚ್ಚಿನ ಮಕ್ಕಳು ಈ ಸೋಂಕಿಗೆ ತುತ್ತಾಗಿದ್ದಾರೆ.

ಇದು ಮಳೆಗಾಲವಾದ್ದರಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಕಣಿಸಿಕೊಳ್ಳುತ್ತದೆ. ಸಣ್ಣ ಜ್ವರ ಕೂಡ ಹೆಚ್ಚು ದಿನ ಇರುತ್ತದೆ. ಜ್ವರ ಉಲ್ಬಣಿಸಿದರೆ ಗುಣವಾಗುವಾಗುವುದು ತಡವಾಗುತ್ತದೆ. ವೈರಲ್‌ ನ್ಯುಮೊನಿಯಾಗೆ ತಿರುಗುತ್ತದೆ. ಆಗ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ‘ಒಂದು ಮಗುವಿನಲ್ಲಿ ವೈರಾಣು ಸೋಂಕು ಕಾಣಿಸಿಕೊಂಡರೆ ಆ ಮಗುವಿನೊಂದಿಗೆ ಇನ್ನೊಂದು ಮಗು ಬೆರೆಯಲು ಬಿಡಬಾರದು. ವೈರಾಣು ಜ್ವರಕ್ಕೆ ನಿರ್ದಿಷ್ಟ ಔಷಧ ಇರುವುದಿಲ್ಲ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ- ಹಸಿವಿನಿಂದ ಹಸುಗೂಸು ಸಾವು, ಬದುಕುಳಿದ 3 ವರ್ಷದ ಮಗು

ವೈರಲ್ ಸೋಂಕಿನ ಲಕ್ಷಣ ಇರುವ ಬಹಳಷ್ಟು ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಹಾಗಾಗಿ, ಕೋವಿಡ್‌ ಸೋಂಕಿನ ಭಯ ಬೇಡ ಎಂದಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನ 30 ಹಾಸಿಗೆಗಳಲ್ಲಿ 26 ಹಾಸಿಗೆಗಳು ಭರ್ತಿಯಾಗಿವೆ. ಆರು ಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಯಾದಗಿರಿಯಲ್ಲಿ  ಒಂದೇ ದಿನ 750 ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಕಾಣಿಸಿಕೊಂಡಿದೆ.

ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ವೈರಲ್ ಜ್ವರದಿಂದ ಹಾಸಿಗೆ ಸಿಗದೆ ಮಕ್ಳಳು, ಪೋಷಕರು ಪರದಾಡಿದ ಘಟನೆಗಳು ನಡೆದಿವೆ. ಗದಗ ಜಿಲ್ಲೆಯಲ್ಲಿ 327 ಕ್ಕೂ ಹೆಚ್ಚು ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಆರೋಗ್ಯ ಸಮಸ್ಯೆ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ 200 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಯಾ ಜಿಲ್ಲೆಗಳ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ತೀವ್ರ ನಿಗಾ ವಹಿಸಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಕುದಿಸಿ ಆರಿಸಿದ ನೀರು ನೀಡುವುದು, ಪೌಷ್ಠಿಕ ಆಹಾರ, ಸ್ವಚ್ಛತೆ, ರಸ್ತೆ ಬದಿಯ ತಿಂಡಿಗಳಿಮದ ಮಕ್ಕಳನ್ನೂ ದೂರವಿರಿಸುವುದು, ಮಕ್ಕಳನ್ನು ಮನೆಯಲ್ಲಿ ನೆನೆಯಲು ಬಿಡದೆ ಇರುವುದಂತಹ ಕ್ರಮಗಳನ್ನು ರೂಢಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ.

ಇನ್ನು, ಮಕ್ಕಳು ಬೆಡ್, ಚಿಕಿತ್ಸೆ ದೊರೆಯದೆ ಪರದಾಡುತ್ತಿರುವುದಕ್ಕೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಕಾಡುತ್ತಿದೆ, ಪುಟ್ಟ ಮಕ್ಕಳ ಚಿಕಿತ್ಸೆಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ” ಎಂದು ಟ್ವೀಟ್ ಮಾಡಿದೆ.

“ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್ ಜ್ವರಕ್ಕೆ ಬೆಡ್ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕರೋನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ” ಎಂದು ಬಿಜೆಪಿ ಆಡಳಿತದ ವಿರುದ್ಧ ಕಿಡಿ ಕಾರಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...