Homeಕರ್ನಾಟಕರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

ರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

- Advertisement -
- Advertisement -

ಉತ್ತರಪ್ರದೇಶದಲ್ಲಿ ಕಳೆದ ತಿಂಗಳಿನಿಂದ ಮಕ್ಕಳನ್ನು ಕಾಡುತ್ತಿರುವ ವೈರಲ್ ಜ್ವರ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ನೂರಾರು ಮಕ್ಕಳು ಈ ವೈರಾಣು ಸೋಂಕು ಮತ್ತು ಡೆಂಗ್ಯೂನಿಂದ ಬಳಲುತ್ತಿವೆ ಎಂದು ವರದಿಯಾಗಿದೆ.

ಯಾದಗಿರಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ಬೆಂಗಳೂರು, ಗದಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರಿನ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಯಾದಗಿರಿ ಮತ್ತು ಗದಗದಲ್ಲಿ ಹೆಚ್ಚಿನ ಮಕ್ಕಳು ಈ ಸೋಂಕಿಗೆ ತುತ್ತಾಗಿದ್ದಾರೆ.

ಇದು ಮಳೆಗಾಲವಾದ್ದರಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಕಣಿಸಿಕೊಳ್ಳುತ್ತದೆ. ಸಣ್ಣ ಜ್ವರ ಕೂಡ ಹೆಚ್ಚು ದಿನ ಇರುತ್ತದೆ. ಜ್ವರ ಉಲ್ಬಣಿಸಿದರೆ ಗುಣವಾಗುವಾಗುವುದು ತಡವಾಗುತ್ತದೆ. ವೈರಲ್‌ ನ್ಯುಮೊನಿಯಾಗೆ ತಿರುಗುತ್ತದೆ. ಆಗ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ‘ಒಂದು ಮಗುವಿನಲ್ಲಿ ವೈರಾಣು ಸೋಂಕು ಕಾಣಿಸಿಕೊಂಡರೆ ಆ ಮಗುವಿನೊಂದಿಗೆ ಇನ್ನೊಂದು ಮಗು ಬೆರೆಯಲು ಬಿಡಬಾರದು. ವೈರಾಣು ಜ್ವರಕ್ಕೆ ನಿರ್ದಿಷ್ಟ ಔಷಧ ಇರುವುದಿಲ್ಲ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ- ಹಸಿವಿನಿಂದ ಹಸುಗೂಸು ಸಾವು, ಬದುಕುಳಿದ 3 ವರ್ಷದ ಮಗು

ವೈರಲ್ ಸೋಂಕಿನ ಲಕ್ಷಣ ಇರುವ ಬಹಳಷ್ಟು ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಹಾಗಾಗಿ, ಕೋವಿಡ್‌ ಸೋಂಕಿನ ಭಯ ಬೇಡ ಎಂದಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನ 30 ಹಾಸಿಗೆಗಳಲ್ಲಿ 26 ಹಾಸಿಗೆಗಳು ಭರ್ತಿಯಾಗಿವೆ. ಆರು ಮಕ್ಕಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಯಾದಗಿರಿಯಲ್ಲಿ  ಒಂದೇ ದಿನ 750 ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಕಾಣಿಸಿಕೊಂಡಿದೆ.

ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ವೈರಲ್ ಜ್ವರದಿಂದ ಹಾಸಿಗೆ ಸಿಗದೆ ಮಕ್ಳಳು, ಪೋಷಕರು ಪರದಾಡಿದ ಘಟನೆಗಳು ನಡೆದಿವೆ. ಗದಗ ಜಿಲ್ಲೆಯಲ್ಲಿ 327 ಕ್ಕೂ ಹೆಚ್ಚು ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಆರೋಗ್ಯ ಸಮಸ್ಯೆ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ 200 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಯಾ ಜಿಲ್ಲೆಗಳ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಮಯದಲ್ಲಿ ಮಕ್ಕಳ ಬಗ್ಗೆ ಪೋಷಕರು ತೀವ್ರ ನಿಗಾ ವಹಿಸಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಕುದಿಸಿ ಆರಿಸಿದ ನೀರು ನೀಡುವುದು, ಪೌಷ್ಠಿಕ ಆಹಾರ, ಸ್ವಚ್ಛತೆ, ರಸ್ತೆ ಬದಿಯ ತಿಂಡಿಗಳಿಮದ ಮಕ್ಕಳನ್ನೂ ದೂರವಿರಿಸುವುದು, ಮಕ್ಕಳನ್ನು ಮನೆಯಲ್ಲಿ ನೆನೆಯಲು ಬಿಡದೆ ಇರುವುದಂತಹ ಕ್ರಮಗಳನ್ನು ರೂಢಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ.

ಇನ್ನು, ಮಕ್ಕಳು ಬೆಡ್, ಚಿಕಿತ್ಸೆ ದೊರೆಯದೆ ಪರದಾಡುತ್ತಿರುವುದಕ್ಕೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಕಾಡುತ್ತಿದೆ, ಪುಟ್ಟ ಮಕ್ಕಳ ಚಿಕಿತ್ಸೆಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ” ಎಂದು ಟ್ವೀಟ್ ಮಾಡಿದೆ.

“ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್ ಜ್ವರಕ್ಕೆ ಬೆಡ್ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕರೋನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ” ಎಂದು ಬಿಜೆಪಿ ಆಡಳಿತದ ವಿರುದ್ಧ ಕಿಡಿ ಕಾರಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...