Homeಅಂತರಾಷ್ಟ್ರೀಯCAB : ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಪಾನ್‌ ಪಿಎಂ ಶಿಂಜೊ ಅಬೆ ಭಾರತ ಭೇಟಿ ರದ್ದು?

CAB : ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಪಾನ್‌ ಪಿಎಂ ಶಿಂಜೊ ಅಬೆ ಭಾರತ ಭೇಟಿ ರದ್ದು?

- Advertisement -
- Advertisement -

ಭಾರತದಲ್ಲಿ ಎರಡು ಸದನಗಳಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಿ ರಾಷ್ಟ್ರಪತಿಗಳ ಅಂಕಿತ ಸಹ ಬಿದ್ದು ಕಾಯ್ದೆಯಾಗಿ ಜಾರಿಯಾಗಿದೆ. ಆದರೆ ಅದರ ವಿರುದ್ಧದ ಪ್ರತಿಭಟನೆಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಮುಖ್ಯವಾಗಿ ಈಶಾನ್ಯ ಭಾರತ ಹೊತ್ತಿ ಉರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಜಪಾನ್‌ನ ಪ್ರಧಾನಿ ಶಿಂಜೊ ಅಬೆ ಅವರು ಭಾನುವಾರ ಆರಂಭವಾಗಲಿರುವ ಭಾರತ ಪ್ರವಾಸವನ್ನು ರದ್ದುಗೊಳಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಜಪಾನ್‌ನ ಜಿಜಿ ಪ್ರೆಸ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಅಬೆ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಗುವಾಹಟಿಯಲ್ಲಿ ಶೃಂಗಸಭೆ ಆಯೋಜನೆಗೊಂಡಿತ್ತು. ಆದರೀಗ ಅಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ತಮ್ಮ ಪ್ರವಾಸವನ್ನು ರದ್ದುಗೊಳಿಸಬೇಕಾದ ಅನಿವಾರ್ಯತೆ ಬಂದಿದೆ ಎನ್ನಲಾಗುತ್ತಿದೆ.

ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಮತ್ತು ದೇಶದ ಗೃಹ ಸಚಿವರು ಗುರುವಾರ ಈಶಾನ್ಯ ಭಾರತಕ್ಕೆ ಭೇಟಿ ನೀಡಬೇಕಿತ್ತು. ಆದರೆ ಈಶಾನ್ಯದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಅವರು ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಇಂದು ಕಾರ್ಯಕ್ರಮಕ್ಕಾಗಿ ಬಾಂಗ್ಲಾದೇಶ ಗೃಹ ಸಚಿವ ಖಾನ್ ಮೇಘಾಲಯಕ್ಕೆ ಭೇಟಿ ನೀಡಬೇಕಿತ್ತು. ಅದು ಕೂಡ ರದ್ದಾಗಲಿದೆ.

ಕಳೆದ ಎರಡು ದಿನಗಳಲ್ಲಿ ಅಸ್ಸಾಂ ಭಾರಿ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ಸಾವಿರಾರು ಜನರು ಬೀದಿಗಿಳಿದು ನಿಷೇಧಾಜ್ಞೆಗಳನ್ನು ಧಿಕ್ಕರಿಸಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಅಬೆ ಅವರನ್ನು ಸ್ವಾಗತಿಸಲು ಗುವಾಹಟಿಯಲ್ಲಿ ನಿರ್ಮಿಸಲಾದ ಹೋರ್ಡಿಂಗ್‌ಗಳನ್ನು ಬುಧವಾರ ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ.

“ಜಪಾನ್‌ ಸರ್ಕಾರ ಮತ್ತು ಭಾರತೀಯ ಸರ್ಕಾರಗಳು ಕೊನೆಯ ಸಾಧ್ಯತೆಯನ್ನು ಅನ್ವೇಷಿಸುತ್ತಲೇ ಇವೆ” ಎಂದು ಜಪಾನಿನ ಪತ್ರಿಕೆಗಳ ವರದಿ ತಿಳಿಸಿವೆ.

ಪಿಎಂ ಮೋದಿ ಮತ್ತು ಅಬೆ ನಡುವೆ ಶೃಂಗಸಭೆ ಡಿಸೆಂಬರ್ 15 ಮತ್ತು 17 ರ ನಡುವೆ ನಡೆಯಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್ ಘೋಷಿಸಿದ್ದರು. ಶೃಂಗಸಭೆಯ ಸ್ಥಳವನ್ನು ಸರ್ಕಾರ ಘೋಷಿಸದಿದ್ದರೂ, ಗುವಾಹಟಿಯಲ್ಲಿ ಆತಿಥ್ಯ ವಹಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಥಳವನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆಯೇ ಎಂದು ಕೇಳಿದಾಗ, ಕುಮಾರ್ ಹೇಳಿದರು: “ನಾನು ಅದರ ಬಗ್ಗೆ ಸ್ಪಷ್ಟಪಡಿಸುವ ಸ್ಥಿತಿಯಲ್ಲಿಲ್ಲ” ಎಂದು ಹೇಳಿದ್ದಾರೆ.

ಸಿದ್ಧತೆಗಳನ್ನು ಪರಿಶೀಲಿಸಲು ಜಪಾನಿನ ತಂಡ ಬುಧವಾರ ಗುವಾಹಟಿಗೆ ಭೇಟಿ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...