Homeಮುಖಪುಟವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

- Advertisement -
- Advertisement -

ಘರ್ಜಿಸುತ್ತಿರುವ ಸಿಂಹವೊಂದನ್ನು ರಚ್ಚೆಹಿಡಿದಿರುವ ಮಗುವನ್ನು ಎತ್ತಿಕೊಂಡು ಹೋಗು ರೀತಿಯಲ್ಲಿ ಮಹಿಳೆಯೊಬ್ಬರು ಹೊತ್ತೊಯ್ದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯು ಕುವೈತ್‌ ದೇಶದ ಸಬಾಹಿಯ ಜಿಲ್ಲೆಯ ನಗರದ ವಸತಿ ಪ್ರದೇಶಲ್ಲಿ ನಡೆದಿದೆ ಎಂದು ಅಲ್ಲಿನ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

ವಿಡಿಯೊದಲ್ಲಿ ಹಿಬಾಬ್ ಧರಿಸಿರುವ ಮಹಿಳೆಯೊಬ್ಬರು ಸಿಂಹಿಣಿಯನ್ನು ಹೊತ್ತುಕೊಂಡು ಹೋಗುತ್ತಾರೆ. ಈ ವೇಳೆ ಅದು ಘರ್ಜಿಸುತ್ತಿದ್ದರೂ, ಭಾರವಾಗಿರುವ ಅದನ್ನು ಕಷ್ಟದಿಂದಲೇ ಎತ್ತಿಕೊಂಡು ಹೋಗಿ ಇನ್ನೊಂದು ಬದಿಯಲ್ಲಿ ಅದನ್ನು ಇಳಿಸುತ್ತಾರೆ.

ಇದನ್ನೂ ಓದಿ:ಜಾರ್ಖಂಡ್‌: ’ಪವಿತ್ರ ಮರ’ ಕಡಿದ ಆರೋಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ 150 ಜನರ ಗುಂಪು

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗಲು ಪ್ರಾರಂಭಿಸಿದಾಗ ಕೆಲವರು ಅದರ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದರು. ಇನ್ನು ಕೆಲವರು ಅದರ ಬಗ್ಗೆ ಹಾಸ್ಯ ಚಟಾಕಿಯನ್ನು ಹಾರಿಸಿದ್ದಾರೆ.

ಆದಾಗ್ಯೂ, ಈ ವಿಡಿಯೊ ಅಸಲಿ ಎಂದು ಕುವೈತ್‌ ಪತ್ರಿಕೆ ಅಲ್‌-ಅನ್ಬಾ ವರದಿ ಮಾಡಿದೆ. ಅದು ಸುದ್ದಿ ಮಾಡಿರುವಂತೆ, ಜನವರಿ 1, 2022 ರಂದು ಈ ವಿಡಿಯೊವನ್ನು ಮಾಡಲಾಗಿದೆ. ಸಿಂಹಿಣಿಯನ್ನು ಅದನ್ನು ಎತ್ತಿಕೊಂಡು ಹೋಗುತ್ತಿರುವ ಮಹಿಳೆ ಸಾಕಿದ್ದಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಮನೆಯಿಂದ ತಪ್ಪಿಸಿಕೊಂಡ ಸಿಂಹಿಣಿಯು ಬೀದಿಯಲ್ಲಿ ಅಲೆದಾಡಿ ನಿವಾಸಿಗಳನ್ನು ಭಯಭೀತರನ್ನಾಗಿಸಿತ್ತು. ನಂತರ ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ, ಅದರ ಮಾಲಿಕರನ್ನು ಕಂಡು ಹಿಡಿದು, ಅದನ್ನು ಹಿಡಿಯಲು ಮಹಿಳೆಯಗೆ ಸಹಾಯ ಮಾಡಿದ್ದಾರೆ ಎಂದು ಅಲ್‌ ಅರೇಬಿಯಾ ವರದಿ ಮಾಡಿದೆ.

ಕುವೈತ್‌ನಲ್ಲಿ 2018ರಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದವು. ಈ ವೇಳೆ ಹಲವಾರು ಸಿಂಹಗಳು ಬೀದಿಗಳಲ್ಲಿ ಅಲೆದಾಡಿದ್ದವು. ಅಧಿಕಾರಿಗಳು ಅದನ್ನು ಟ್ರ್ಯಾಂಕ್ವಿಲೈಜರ್‌ ಬಳಸಿ ಸೆರೆಹಿಡಿದು ಮೃಗಾಲಯಕ್ಕೆ ಹಸ್ತಾಂತರಿಸಿದ್ದರು.

ಸಿಂಹ, ಹುಲಿ ಮುಂತಾದ ಕಾಡು ಪ್ರಾಣಿಗಳನ್ನು ಸಾಕುವುದು ಕುವೈತ್‌ನಲ್ಲಿ ಕಾನೂನುಬಾಹಿರವಾಗಿದ್ದರೂ, ಅಲ್ಲಿನ ನಿವಾಸಿಗಳು ಇನ್ನೂ ಕಾಡು ಪ್ರಾಣಿಗಳನ್ನು ಸಾಕುತ್ತಿದ್ದಾರೆ.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...