Homeಮುಖಪುಟವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

ವೈರಲ್‌ ವಿಡಿಯೊ: ಘರ್ಜಿಸುತ್ತಿರುವ ಸಿಂಹವನ್ನು ಹೊತ್ತೊಯ್ದ ಮಹಿಳೆ!

- Advertisement -
- Advertisement -

ಘರ್ಜಿಸುತ್ತಿರುವ ಸಿಂಹವೊಂದನ್ನು ರಚ್ಚೆಹಿಡಿದಿರುವ ಮಗುವನ್ನು ಎತ್ತಿಕೊಂಡು ಹೋಗು ರೀತಿಯಲ್ಲಿ ಮಹಿಳೆಯೊಬ್ಬರು ಹೊತ್ತೊಯ್ದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯು ಕುವೈತ್‌ ದೇಶದ ಸಬಾಹಿಯ ಜಿಲ್ಲೆಯ ನಗರದ ವಸತಿ ಪ್ರದೇಶಲ್ಲಿ ನಡೆದಿದೆ ಎಂದು ಅಲ್ಲಿನ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

ವಿಡಿಯೊದಲ್ಲಿ ಹಿಬಾಬ್ ಧರಿಸಿರುವ ಮಹಿಳೆಯೊಬ್ಬರು ಸಿಂಹಿಣಿಯನ್ನು ಹೊತ್ತುಕೊಂಡು ಹೋಗುತ್ತಾರೆ. ಈ ವೇಳೆ ಅದು ಘರ್ಜಿಸುತ್ತಿದ್ದರೂ, ಭಾರವಾಗಿರುವ ಅದನ್ನು ಕಷ್ಟದಿಂದಲೇ ಎತ್ತಿಕೊಂಡು ಹೋಗಿ ಇನ್ನೊಂದು ಬದಿಯಲ್ಲಿ ಅದನ್ನು ಇಳಿಸುತ್ತಾರೆ.

ಇದನ್ನೂ ಓದಿ:ಜಾರ್ಖಂಡ್‌: ’ಪವಿತ್ರ ಮರ’ ಕಡಿದ ಆರೋಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ 150 ಜನರ ಗುಂಪು

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗಲು ಪ್ರಾರಂಭಿಸಿದಾಗ ಕೆಲವರು ಅದರ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದರು. ಇನ್ನು ಕೆಲವರು ಅದರ ಬಗ್ಗೆ ಹಾಸ್ಯ ಚಟಾಕಿಯನ್ನು ಹಾರಿಸಿದ್ದಾರೆ.

ಆದಾಗ್ಯೂ, ಈ ವಿಡಿಯೊ ಅಸಲಿ ಎಂದು ಕುವೈತ್‌ ಪತ್ರಿಕೆ ಅಲ್‌-ಅನ್ಬಾ ವರದಿ ಮಾಡಿದೆ. ಅದು ಸುದ್ದಿ ಮಾಡಿರುವಂತೆ, ಜನವರಿ 1, 2022 ರಂದು ಈ ವಿಡಿಯೊವನ್ನು ಮಾಡಲಾಗಿದೆ. ಸಿಂಹಿಣಿಯನ್ನು ಅದನ್ನು ಎತ್ತಿಕೊಂಡು ಹೋಗುತ್ತಿರುವ ಮಹಿಳೆ ಸಾಕಿದ್ದಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಮನೆಯಿಂದ ತಪ್ಪಿಸಿಕೊಂಡ ಸಿಂಹಿಣಿಯು ಬೀದಿಯಲ್ಲಿ ಅಲೆದಾಡಿ ನಿವಾಸಿಗಳನ್ನು ಭಯಭೀತರನ್ನಾಗಿಸಿತ್ತು. ನಂತರ ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ, ಅದರ ಮಾಲಿಕರನ್ನು ಕಂಡು ಹಿಡಿದು, ಅದನ್ನು ಹಿಡಿಯಲು ಮಹಿಳೆಯಗೆ ಸಹಾಯ ಮಾಡಿದ್ದಾರೆ ಎಂದು ಅಲ್‌ ಅರೇಬಿಯಾ ವರದಿ ಮಾಡಿದೆ.

ಕುವೈತ್‌ನಲ್ಲಿ 2018ರಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದವು. ಈ ವೇಳೆ ಹಲವಾರು ಸಿಂಹಗಳು ಬೀದಿಗಳಲ್ಲಿ ಅಲೆದಾಡಿದ್ದವು. ಅಧಿಕಾರಿಗಳು ಅದನ್ನು ಟ್ರ್ಯಾಂಕ್ವಿಲೈಜರ್‌ ಬಳಸಿ ಸೆರೆಹಿಡಿದು ಮೃಗಾಲಯಕ್ಕೆ ಹಸ್ತಾಂತರಿಸಿದ್ದರು.

ಸಿಂಹ, ಹುಲಿ ಮುಂತಾದ ಕಾಡು ಪ್ರಾಣಿಗಳನ್ನು ಸಾಕುವುದು ಕುವೈತ್‌ನಲ್ಲಿ ಕಾನೂನುಬಾಹಿರವಾಗಿದ್ದರೂ, ಅಲ್ಲಿನ ನಿವಾಸಿಗಳು ಇನ್ನೂ ಕಾಡು ಪ್ರಾಣಿಗಳನ್ನು ಸಾಕುತ್ತಿದ್ದಾರೆ.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....