Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...