Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...