Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...