Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...