Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...