Homeಕರ್ನಾಟಕವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

ವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

- Advertisement -
- Advertisement -

ಮಧುಗಿರಿ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಎ.ರಾಮಚಂದ್ರಪ್ಪ(58) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಅವರು ತಮ್ಮ ಕಚೇರಿಯಲ್ಲೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿತ್ತು. ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದ್ದು, ಪ್ರಸ್ತುತ ಮಧುಗಿರಿ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವೈರಲ್ ವಿಡಿಯೊ

ಗುರುವಾರದಂದು ಅವರ ವಿಡಿಯೊ ಹೊರಬಿದ್ದ ಬೆನ್ನಲ್ಲೇ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರನ್ನು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶಿಸಿದ್ದರು. ವಿಡಿಯೋದಲ್ಲಿ ಕಾಣಿಸಿಕೊಂಡಿರುವ 30 ವರ್ಷದ ಮಹಿಳೆ ಶುಕ್ರವಾರ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಧಿಕಾರದಲ್ಲಿರುವ ವ್ಯಕ್ತಿಯಿಂದ ಲೈಂಗಿಕ ಸಂಭೋಗ (BNS 68), ಲೈಂಗಿಕ ಕಿರುಕುಳ (BNS 75), ಮತ್ತು ಮಹಿಳೆಯ ಘನತೆಗೆ ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ (BNS 79) ಸೇರಿದಂತೆ ಅನೇಕ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವಿಡಿಯೊ

ಪ್ರಕರಣದ ಕುರಿತು ಮಾತನಾಡಿದ ತುಮಕೂರು ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., “30 ವರ್ಷದ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಡಿವೈಎಸ್‌ಪಿಯನ್ನು ಬಂಧಿಸಲಾಗಿದೆ. ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಹೇಳಿದ್ದಾರೆ.

ಡಿವೈಎಸ್ಪಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಸಮವಸ್ತ್ರದಲ್ಲಿದ್ದಾಗ ಕೃತ್ಯವನ್ನು ಎಸಗಿದ್ದು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. 35 ಸೆಕೆಂಡುಗಳ ವೀಡಿಯೊವನ್ನು ಅವರ ಕಚೇರಿಯ ಹೊರಗಿನ ಕಿಟಕಿಯ ಮೂಲಕ ರೆಕಾರ್ಡ್ ಮಾಡಲಾಗಿದೆ. ವಿಡಿಯೊ ದಾಖಲೆ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆಯು ಅಧಿಕಾರಿಗೆ ಎಚ್ಚರಿಸಿದ್ದರು.

ಮಹಿಳೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಡಿವೈಎಸ್ಪಿ ಕಚೇರಿಗೆ ಬಂದಿದ್ದರು ಪೊಲೀಸ್ ಮೂಲಗಳು ತಿಳಿಸಿವೆ ಎಂದು TNIE ವರದಿ ಉಲ್ಲೇಖಿಸಿದೆ. ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಿರುವುದನ್ನು ಖಚಿತಪಡಿಸಿರುವ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಲಾಭು ರಾಮ್, ‘‘ಘಟನೆ ಹಿನ್ನೆಲೆಯಲ್ಲಿ ಡಿವೈಎಸ್ಪಿ ಅವರನ್ನು ಅಮಾನತುಗೊಳಿಸಲಾಗಿದೆ,’’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...