Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...