Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...