Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...