Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...