Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...